ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈದಾಪುರ: ಸಮಯಪ್ರಜ್ಞೆಯಿಂದ ಲಾಭ ಗಳಿಸಿದ ರೈತ

ಲಾಕ್‍ಡೌನ್ ವಿನಾಯ್ತಿ ಅನುಕೂಲ ಪಡೆದ ಬೆಳೆಗಾರ
Last Updated 29 ಏಪ್ರಿಲ್ 2020, 10:21 IST
ಅಕ್ಷರ ಗಾತ್ರ

ಸೈದಾಪುರ: ಕೊರೊನಾ ಸಂಕಷ್ಟದಿಂದಾಗಿ ಕಂಗೆಟ್ಟಿರುವ ರೈತರ ನಡುವೆ ಖರಬೂಜ ಹಣ್ಣುಗಳನ್ನು ಬೆಳೆದ ರೈತರೊಬ್ಬರು ಲಾಕ್‌ಡೌನ್‌ ವಿನಾಯ್ತಿಯ ಅನುಕೂಲ ಪಡೆದು ಹಣ್ಣು ಮಾರಾಟ ಮಾಡಿ ಉತ್ತಮ ಆದಾಯ ಗಳಿಸಿದ್ದಾರೆ.

ಸಮೀಪದ ಲಿಂಗೇರಿ ಗ್ರಾಮದ ಸಾಂಬಶಿವ ರೆಡ್ಡಿ ವೆಂಕಟಕೃಷ್ಣಯ್ಯ ಅವರು ತಮ್ಮ 3 ಎಕರೆ ಒಣ ಭೂಮಿಯಲ್ಲಿ ಒಂದು ಕೊಳವೆ ಬಾವಿ ಕೊರೆಸಿಕೊಂಡು, ತೋಟಗಾರಿಕೆ ಇಲಾಖೆಯಿಂದ ಹನಿ ನಿರಾವರಿ, ಬೆಡ್, ಪ್ಲಾಸ್ಟಿಕ್ ಹೊದಿಕೆಯ ಸಹಾಯ ಪಡೆದು ಒಂದೂವರೆ ಕೆ.ಜಿ ಖರಬೂಜ ಬೀಜಗಳನ್ನು ತಂದು ಬಿತ್ತಿದ್ದರು.

ಒಟ್ಟು 3 ಎಕರೆ ಜಮೀನಿನಲ್ಲಿ ಖರಬೂಜ ಬೆಳೆಯಲು ಸುಮಾರು ₹2 ರಿಂದ 3 ಲಕ್ಷ ಖರ್ಚು ಮಾಡಿದ್ದಾರೆ. ಇದರಲ್ಲಿ ಈಗಾಗಲೇ17 ಟನ್ ಕರಬೂಜ ಹಣ್ಣುಗಳನ್ನು ಕೆ.ಜಿ.ಗೆ ₹20ರಂತೆ ಮಾರಾಟ ಮಾಡಿದ್ದಾರೆ. ಆ ಮೂಲಕ ₹3.40 ಲಕ್ಷ ಗಳಿಸಿದ್ದಾರೆ. ಇನ್ನೊಂದು ವಾರದಲ್ಲಿ 10 ಟನ್‌ ಹಣ್ಣು ಮಾರಾಟ ಮಾಡಲಾಗುತ್ತದೆ. ಕನಿಷ್ಠ 1 ಲಕ್ಷ ಆದಾಯದ ನಿರೀಕ್ಷೆ ಹೊಂದಿದ್ದಾರೆ. ಲಾಕ್‍ಡೌನ್ ಮಧ್ಯೆಯೂ ಸರ್ಕಾರ ಹಣ್ಣು– ತರಕಾರಿಗಳ ಮಾರಾಟಕ್ಕೆ ರಿಯಾಯಿತಿ ನೀಡಿರುವುದರಿಂದ ಹಣ್ಣುಗಳನ್ನು ಪ್ರತಿ ನಿತ್ಯ ಕಟಾವು ಮಾಡಿ ಸಮೀಪದ ಯಾದಗಿರಿ, ಶಹಾಪುರ, ರಾಯಚೂರು, ನಾರಾಯಣಪೇಠ ಮಾರುಕಟ್ಟೆಗಳಿಗೆ ಬಾಡಿಗೆ ವಾಹನದ ಮೂಲಕ ತಲುಪಿಸುತ್ತಾರೆ. ಆ ಮೂಲಕವೇ ಉತ್ತಮ ಆದಾಯ ಗಳಿಸುತ್ತಿದ್ದಾರೆ. ‘ಸಮಸ್ಯೆಗಳನ್ನು ಪರಿಹರಿಸಲು ಇರುವ ಮಾರ್ಗವನ್ನು ಕಂಡುಕೊಳ್ಳುವ ಛಲ ನಮ್ಮಲ್ಲಿ ಇರಬೇಕು’ ಎಂದು ಸಾಂಬಶಿವ ರೆಡ್ಡಿ ವೆಂಕಟಕೃಷ್ಣಯ್ಯ ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT