ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಯ್ಯಣ್ಣ ಹಾಲಭಾವಿ ಮಾತನಾಡಿ, ‘ಕೃಷಿ ವಿರೋಧಿ ಕಾಯ್ದೆಗಳ ಹಿಂತೆಗೆತಕ್ಕೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಇದನ್ನು ಪ್ರತಿಭಟಿಸಿ ಸೋಮವಾರ ನಡೆಯುತ್ತಿರುವ ಭಾರತ ಬಂದ್ಗೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ’ ಎಂದರು.