ಈ ಕುರಿತು ಹೇಳಿಕೆ ನೀಡಿರುವ ಅವರು,‘ಕುಡಿಯುವ ನೀರಿಗಾಗಿ ಪಟ್ಟಣದ ನಿವಾಸಿಗಳು ಹಾಗೂ ಸಾರ್ವಜನಿಕರು ಅಲೆಯುತ್ತಿದ್ದಾರೆ. ಜಾನುವಾರುಗಳಿಗೆ ಅಲ್ಲಲ್ಲಿ ಕುಡಿಯಲು ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಬೇಕು. ಅನೇಕ ಕಡೆಗಳಲ್ಲಿ ಶುದ್ಧ ಕುಡಿಯುವ ಘಟಕಗಳು ಕೆಟ್ಟು ನಿಂತಿವೆ. ಕೊಳೆವೆ ಬಾವಿಗಳು ಸಹ ಕೆಟ್ಟಿವೆ. ಅವುಗಳನ್ನು ದುರಸ್ತಿಗೊಳಿಸಿ ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.