<p><strong>ಸುರಪುರ:</strong> ಕಳಪೆ ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕ ಮಾರಾಟಗಾರರ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಸೋಮವಾರ ತಹಶೀಲ್ದಾರ್ ಎಚ್.ಎ.ಸರಕಾವಸ ಮತ್ತು ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಚನ್ನಪ್ಪ ಆನೆಗುಂದಿ ಮಾತನಾಡಿ, ‘ಕಳಪೆ ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕ ಮಾರಾಟ ನಡೆದೆ ಇದೆ. ಇವುಗಳನ್ನು ಖರೀದಿಸಿ ಉಳುಮೆ ಮಾಡುವ ರೈತ ನಷ್ಟ ಹೊಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ತಮ್ಮ ಲಾಭದ ದೃಷ್ಟಿಕೋನವನ್ನಷ್ಟೇ ಹೊಂದಿರುವ ವರ್ತಕರು, ರೈತರನ್ನು ಸಾಲದ ಕೂಪಕ್ಕೆ ದೂಡುತ್ತಿದ್ದಾರೆ. ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ. ರೈತ ಸಂಘಗಳು ಹೋರಾಟ ಮಾಡಿದ ನಂತರ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕೈತೊಳೆದುಕೊಳ್ಳುತ್ತಾರೆ. ಇದರಿಂದ ರೈತನಿಗೆ ಪ್ರಯೋಜನವಿಲ್ಲ. ರೈತನಿಗೆ ಪರಿಹಾರ ದೊರಕುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ಧರ್ಮಣ್ಣ ದೊರೆ ಮಾತನಾಡಿ, ‘ನಕಲಿ ಬೀಜ ಇತರ ಸಾಮಗ್ರಿ ಮಾರಾಟ ಮಾಡಲು ವರ್ತಕರು ಹೆದರುವಂತಾಗಬೇಕು. ರೈತರು ಕೇಳಿದರೆ ಅಸಲಿ ಬಿಲ್ ಕೊಡುವುದಿಲ್ಲ. ಜಿಎಸ್ಟಿ ಬಿಲ್ ನೀಡುವಂತೆ ತಾಕೀತು ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ವರ್ತಕರು ದರಪಟ್ಟಿ ಪ್ರದರ್ಶಿಸುವಂತೆ ಸೂಚಿಸಬೇಕು. ಸಾಕಷ್ಟು ಗೊಬ್ಬರ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಕೃಷಿ ಇಲಾಖೆ ಎಲ್ಲ ಯೋಜನೆಗಳು ಸಮರ್ಪಕವಾಗಿ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಯ್ಯ ಆಲ್ಹಾಳ, ಸಿದ್ದು ನಾಯ್ಕೋಡಿ, ಅಂಬ್ರಪ್ಪಗೌಡ ರುಕ್ಮಾಪುರ, ಸುಗ್ರೀವ ಬಾದ್ಯಾಪುರ, ರಫೀಕ್ ಸುರಪುರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ಕಳಪೆ ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕ ಮಾರಾಟಗಾರರ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಸೋಮವಾರ ತಹಶೀಲ್ದಾರ್ ಎಚ್.ಎ.ಸರಕಾವಸ ಮತ್ತು ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಚನ್ನಪ್ಪ ಆನೆಗುಂದಿ ಮಾತನಾಡಿ, ‘ಕಳಪೆ ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕ ಮಾರಾಟ ನಡೆದೆ ಇದೆ. ಇವುಗಳನ್ನು ಖರೀದಿಸಿ ಉಳುಮೆ ಮಾಡುವ ರೈತ ನಷ್ಟ ಹೊಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ತಮ್ಮ ಲಾಭದ ದೃಷ್ಟಿಕೋನವನ್ನಷ್ಟೇ ಹೊಂದಿರುವ ವರ್ತಕರು, ರೈತರನ್ನು ಸಾಲದ ಕೂಪಕ್ಕೆ ದೂಡುತ್ತಿದ್ದಾರೆ. ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ. ರೈತ ಸಂಘಗಳು ಹೋರಾಟ ಮಾಡಿದ ನಂತರ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕೈತೊಳೆದುಕೊಳ್ಳುತ್ತಾರೆ. ಇದರಿಂದ ರೈತನಿಗೆ ಪ್ರಯೋಜನವಿಲ್ಲ. ರೈತನಿಗೆ ಪರಿಹಾರ ದೊರಕುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕು ಸಮಿತಿ ಅಧ್ಯಕ್ಷ ಧರ್ಮಣ್ಣ ದೊರೆ ಮಾತನಾಡಿ, ‘ನಕಲಿ ಬೀಜ ಇತರ ಸಾಮಗ್ರಿ ಮಾರಾಟ ಮಾಡಲು ವರ್ತಕರು ಹೆದರುವಂತಾಗಬೇಕು. ರೈತರು ಕೇಳಿದರೆ ಅಸಲಿ ಬಿಲ್ ಕೊಡುವುದಿಲ್ಲ. ಜಿಎಸ್ಟಿ ಬಿಲ್ ನೀಡುವಂತೆ ತಾಕೀತು ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ವರ್ತಕರು ದರಪಟ್ಟಿ ಪ್ರದರ್ಶಿಸುವಂತೆ ಸೂಚಿಸಬೇಕು. ಸಾಕಷ್ಟು ಗೊಬ್ಬರ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಕೃಷಿ ಇಲಾಖೆ ಎಲ್ಲ ಯೋಜನೆಗಳು ಸಮರ್ಪಕವಾಗಿ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಯ್ಯ ಆಲ್ಹಾಳ, ಸಿದ್ದು ನಾಯ್ಕೋಡಿ, ಅಂಬ್ರಪ್ಪಗೌಡ ರುಕ್ಮಾಪುರ, ಸುಗ್ರೀವ ಬಾದ್ಯಾಪುರ, ರಫೀಕ್ ಸುರಪುರ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>