‘ಹಿಂಗಾರು ಬಿತ್ತನೆಗೆ ರೈತರು ಜಮೀನು ಸಿದ್ಧ ಮಾಡಿಕೊಂಡಿದ್ದಾರೆ. ಮೊದಲು ಪಡೆದ ಸಾಲ ಮರುಪಾವತಿ ಮಾಡಿ, ಪುನಃ ಸಾಲ ಪಡೆಯಲು ಅಲೆಯುತ್ತಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮರು ಸಾಲ ನೀಡದೆ ರೈತರನ್ನು ಅಲೆದಾಡಿಸುತ್ತಿದ್ದಾರೆ. ಸಾಲ ಮಂಜೂರಾತಿ ಕೆಲಸವನ್ನು ಲೀಡ್ ಬ್ಯಾಂಕ್ನವರು ವಹಿಸಿಕೊಂಡಿದ್ದಾರೆ. ಅಲ್ಲಿಂದ ಮಂಜೂರಾತಿ ಮಾಡಿಸಿಕೊಂಡು ಬರಬೇಕು. ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ’ ಎಂದು ದೂರಿದರು.