<p><strong>ಕೆಂಭಾವಿ:</strong> ಕಳೆದ ವಾರ ಸುರಿದ ಮುಂಗಾರು ಪೂರ್ವ ಮಳೆಯನ್ನಾಧರಿಸಿ ಪಟ್ಟಣದ ಹಲವೆಡೆ ರೈತರು ಹತ್ತಿ ಬೀಜ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.</p>.<p>ಇನ್ನೂ ಕೆಂಭಾವಿ ಮತ್ತು ಯಕ್ತಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಬಿತ್ತನೆಗೆ ಬೇಕಾಗುವಷ್ಟು ಮಳೆ ಬಂದಿದ್ದು, ವಲಯದ ಇನ್ನೂ ಹಲವಾರು ಗ್ರಾಮಗಳಲ್ಲಿ ಮಳೆ ಬೀಳದೆ ರೈತರು ಆಕಾಶದತ್ತ ಮುಖ ಮಾಡುತ್ತಿದ್ದಾರೆ.</p>.<p>ಕೃಷಿ ಇಲಾಖೆಯ ಪ್ರಕಾರ ವಲಯದಲ್ಲಿ ಕೆಂಭಾವಿ ತಾಲ್ಲೂಕು ವ್ಯಾಪ್ತಿಯಲ್ಲಿ 25 ಸಾವಿರ ಹೆಕ್ಟೇರ್ ಕೃಷಿಭೂಮಿಯಿದ್ದು, 13 ಸಾವಿರ ಹೆಕ್ಟೇರ್ ನೀರಾವರಿ, 12 ಸಾವಿರ ಹೆಕ್ಟೇರ್ ಒಣ ಬೇಸಾಯ ಭೂಮಿ ಇದೆ. ಬಿತ್ತನೆಗೆ ಬೇಕಾಗುವಷ್ಟು ಸಮರ್ಪಕವಾಗಿ ಮಳೆಯಾಗಿಲ್ಲ.</p>.<p>ಕೆಲವು ಪ್ರದೇಶಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆಯಾಗಿದ್ದು, ಅದನ್ನೆ ನಂಬಿ ರೈತರು ಹತ್ತಿ ಬಿತ್ತನೆಯಲ್ಲಿ ತೊಡಗಿದ್ದಾರೆ. ಶೇ 80ರಷ್ಟು ಜಮೀನಿನಲ್ಲಿ ಹತ್ತಿ ಬಿತ್ತನೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಹತ್ತಿ ಬಿತ್ತನೆ ಹೆಚ್ಚಾದಂತೆ ಕಾರ್ಮಿಕರ ಬೇಡಿಕೆಯೂ ಹೆಚ್ಚಾಗಿದೆ.</p>.<p>ಪ್ರತಿದಿನಕ್ಕೆ ಬೇಸಿಗೆಯಲ್ಲಿ ₹150 ರಿಂದ ₹200ಗಳವರೆಗೆ ಕೂಲಿ ಈಗ ₹250ರಿಂದ ₹300ಕ್ಕೆ ಏರಿಕೆಯಾಗಿದೆ. ಪಟ್ಟಣದ ಹಲವೆಡೆ ಹತ್ತಿ ಬಿತ್ತನೆ ಕಾರ್ಯ ಜೋರಾಗಿದೆ. ಇನ್ನಷ್ಟು ಉತ್ತಮ ಮಳೆಗೆ ರೈತರು ಕಾಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಕಳೆದ ವಾರ ಸುರಿದ ಮುಂಗಾರು ಪೂರ್ವ ಮಳೆಯನ್ನಾಧರಿಸಿ ಪಟ್ಟಣದ ಹಲವೆಡೆ ರೈತರು ಹತ್ತಿ ಬೀಜ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.</p>.<p>ಇನ್ನೂ ಕೆಂಭಾವಿ ಮತ್ತು ಯಕ್ತಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಬಿತ್ತನೆಗೆ ಬೇಕಾಗುವಷ್ಟು ಮಳೆ ಬಂದಿದ್ದು, ವಲಯದ ಇನ್ನೂ ಹಲವಾರು ಗ್ರಾಮಗಳಲ್ಲಿ ಮಳೆ ಬೀಳದೆ ರೈತರು ಆಕಾಶದತ್ತ ಮುಖ ಮಾಡುತ್ತಿದ್ದಾರೆ.</p>.<p>ಕೃಷಿ ಇಲಾಖೆಯ ಪ್ರಕಾರ ವಲಯದಲ್ಲಿ ಕೆಂಭಾವಿ ತಾಲ್ಲೂಕು ವ್ಯಾಪ್ತಿಯಲ್ಲಿ 25 ಸಾವಿರ ಹೆಕ್ಟೇರ್ ಕೃಷಿಭೂಮಿಯಿದ್ದು, 13 ಸಾವಿರ ಹೆಕ್ಟೇರ್ ನೀರಾವರಿ, 12 ಸಾವಿರ ಹೆಕ್ಟೇರ್ ಒಣ ಬೇಸಾಯ ಭೂಮಿ ಇದೆ. ಬಿತ್ತನೆಗೆ ಬೇಕಾಗುವಷ್ಟು ಸಮರ್ಪಕವಾಗಿ ಮಳೆಯಾಗಿಲ್ಲ.</p>.<p>ಕೆಲವು ಪ್ರದೇಶಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆಯಾಗಿದ್ದು, ಅದನ್ನೆ ನಂಬಿ ರೈತರು ಹತ್ತಿ ಬಿತ್ತನೆಯಲ್ಲಿ ತೊಡಗಿದ್ದಾರೆ. ಶೇ 80ರಷ್ಟು ಜಮೀನಿನಲ್ಲಿ ಹತ್ತಿ ಬಿತ್ತನೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಹತ್ತಿ ಬಿತ್ತನೆ ಹೆಚ್ಚಾದಂತೆ ಕಾರ್ಮಿಕರ ಬೇಡಿಕೆಯೂ ಹೆಚ್ಚಾಗಿದೆ.</p>.<p>ಪ್ರತಿದಿನಕ್ಕೆ ಬೇಸಿಗೆಯಲ್ಲಿ ₹150 ರಿಂದ ₹200ಗಳವರೆಗೆ ಕೂಲಿ ಈಗ ₹250ರಿಂದ ₹300ಕ್ಕೆ ಏರಿಕೆಯಾಗಿದೆ. ಪಟ್ಟಣದ ಹಲವೆಡೆ ಹತ್ತಿ ಬಿತ್ತನೆ ಕಾರ್ಯ ಜೋರಾಗಿದೆ. ಇನ್ನಷ್ಟು ಉತ್ತಮ ಮಳೆಗೆ ರೈತರು ಕಾಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>