<p><strong>ಯಾದಗಿರಿ</strong>: ತಾಲ್ಲೂಕಿನ ಹತ್ತಿಕುಣಿ ಸಮೀಪದ ದುಗನೂರ್ ಹಟ್ಟಿಯಲ್ಲಿ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದು ಪರಾರಿ ಆಗಿದ್ದ ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ದುಗನೂರ್ ನಿವಾಸಿಯಾದ ಶರಣಪ್ಪ ಹಣಮಂತ ಕೊಲೆ ಮಾಡಿದ ಆರೋಪಿ. ಶರಣಪ್ಪ ಅವರು ತಮ್ಮ ಮಕ್ಕಳಾದ ಸಾನ್ವಿ (4) ಹಾಗೂ ಎರಡೂವರೆ ವರ್ಷದ ಭಾರ್ಗವ್ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದರು. ಹಿರಿಯ ಮಗ ಹೇಮಂತ್ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದನು. ಈ ಸಂಬಂಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>'ಕೌಟುಂಬಿಕ ಕಲಹದಿಂದಾಗಿ ಶರಣಪ್ಪ ಇಬ್ಬರು ಮಕ್ಕಳನ್ನು ಕೊಂದು, ಬಳಿಕ ಗ್ರಾಮದ ಸಮೀಪದ ಬೆಟ್ಟದಲ್ಲಿ ಅವಿತುಕೊಂಡಿದ್ದನು. ತಲೆ ಮರೆಸಿಕೊಂಡ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು' ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ತಾಲ್ಲೂಕಿನ ಹತ್ತಿಕುಣಿ ಸಮೀಪದ ದುಗನೂರ್ ಹಟ್ಟಿಯಲ್ಲಿ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದು ಪರಾರಿ ಆಗಿದ್ದ ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ದುಗನೂರ್ ನಿವಾಸಿಯಾದ ಶರಣಪ್ಪ ಹಣಮಂತ ಕೊಲೆ ಮಾಡಿದ ಆರೋಪಿ. ಶರಣಪ್ಪ ಅವರು ತಮ್ಮ ಮಕ್ಕಳಾದ ಸಾನ್ವಿ (4) ಹಾಗೂ ಎರಡೂವರೆ ವರ್ಷದ ಭಾರ್ಗವ್ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದರು. ಹಿರಿಯ ಮಗ ಹೇಮಂತ್ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದನು. ಈ ಸಂಬಂಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>'ಕೌಟುಂಬಿಕ ಕಲಹದಿಂದಾಗಿ ಶರಣಪ್ಪ ಇಬ್ಬರು ಮಕ್ಕಳನ್ನು ಕೊಂದು, ಬಳಿಕ ಗ್ರಾಮದ ಸಮೀಪದ ಬೆಟ್ಟದಲ್ಲಿ ಅವಿತುಕೊಂಡಿದ್ದನು. ತಲೆ ಮರೆಸಿಕೊಂಡ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು' ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>