<p><strong>ಸುರಪುರ:</strong> ಸಮೀಪದ ರಂಗಂಪೇಟೆಯ ಕೆಪಿಎಸ್ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡು ಶಾಲೆಯಲ್ಲಿದ್ದ ಅಪಾರ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.</p>.<p>ಶಾಲೆಯ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಕೊಠಡಿಯಲ್ಲಿ ಬೆಳಿಗ್ಗೆ ಬೆಂಕಿ ಆವರಿಸಿ ಹೊಗೆ ಬರುತ್ತಿರುವುದನ್ನು ಶಾಲೆಯ ಹತ್ತಿರದ ಮನೆಯವರು ಹಾಗೂ ಸುತ್ತಮುತ್ತಲಿನ ಜನರು ನೋಡಿ ತಕ್ಷಣ ಅಗ್ನಿಶಾಮಕ ದಳದವರಿಗೆ ಹಾಗೂ ಶಾಲೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. </p>.<p>ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಂಶುಪಾಲ ಕೊಠಡಿಯಲ್ಲಿಯ ಸ್ಕ್ಯಾನರ್ ಪ್ರಿಂಟರ್, ಎಚ್ಪಿ ಪ್ರಿಂಟರ್, ಕಂಪ್ಯೂಟರ್, ಸಿಸಿ ಕ್ಯಾಮರಾ ಮಾನಿಟರ್, ಸಿಸಿಟಿವಿ ವಸ್ತುಗಳು ಇನ್ನಿತರ ವಸ್ತುಗಳು ಸುಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಶಾಲೆಯವರು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಎಸ್ಡಿಎಂಸಿ ಅಧ್ಯಕ್ಷ ನಾಸೀರ್ ಕುಂಡಾಲೆ, ಸದಸ್ಯರು ಹಾಗೂ ಶಾಲೆ ಮುಖ್ಯ ಶಿಕ್ಷಕ, ಶಿಕ್ಷಕರು ಇದ್ದರು. ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದರಿಂದ ಹೆಚ್ಚಿನ ಅನಾಹುತಗಳು ತಪ್ಪಿದಂತಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ಸಮೀಪದ ರಂಗಂಪೇಟೆಯ ಕೆಪಿಎಸ್ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡು ಶಾಲೆಯಲ್ಲಿದ್ದ ಅಪಾರ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.</p>.<p>ಶಾಲೆಯ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಕೊಠಡಿಯಲ್ಲಿ ಬೆಳಿಗ್ಗೆ ಬೆಂಕಿ ಆವರಿಸಿ ಹೊಗೆ ಬರುತ್ತಿರುವುದನ್ನು ಶಾಲೆಯ ಹತ್ತಿರದ ಮನೆಯವರು ಹಾಗೂ ಸುತ್ತಮುತ್ತಲಿನ ಜನರು ನೋಡಿ ತಕ್ಷಣ ಅಗ್ನಿಶಾಮಕ ದಳದವರಿಗೆ ಹಾಗೂ ಶಾಲೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. </p>.<p>ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಂಶುಪಾಲ ಕೊಠಡಿಯಲ್ಲಿಯ ಸ್ಕ್ಯಾನರ್ ಪ್ರಿಂಟರ್, ಎಚ್ಪಿ ಪ್ರಿಂಟರ್, ಕಂಪ್ಯೂಟರ್, ಸಿಸಿ ಕ್ಯಾಮರಾ ಮಾನಿಟರ್, ಸಿಸಿಟಿವಿ ವಸ್ತುಗಳು ಇನ್ನಿತರ ವಸ್ತುಗಳು ಸುಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಶಾಲೆಯವರು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಎಸ್ಡಿಎಂಸಿ ಅಧ್ಯಕ್ಷ ನಾಸೀರ್ ಕುಂಡಾಲೆ, ಸದಸ್ಯರು ಹಾಗೂ ಶಾಲೆ ಮುಖ್ಯ ಶಿಕ್ಷಕ, ಶಿಕ್ಷಕರು ಇದ್ದರು. ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದರಿಂದ ಹೆಚ್ಚಿನ ಅನಾಹುತಗಳು ತಪ್ಪಿದಂತಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>