<p><strong>ಸೈದಾಪುರ (ಯಾದಗಿರಿ ಜಿಲ್ಲೆ):</strong> ಪಟ್ಟಣದಲ್ಲಿ ಭಾನುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮಳಿಗೆಗಳಿಗೆ ಬೆಂಕಿ ತಗುಲಿ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. </p>.<p>ಪಟ್ಟಣದ ಬಾಬು ಜಗಜೀವನರಾಂ ವೃತ್ತದ ಹತ್ತಿರದಲ್ಲಿ ಒಟ್ಟು 15 ಮಳಿಗೆಗಳ ಸಂಕೀರ್ಣದಲ್ಲಿ 9 ಮಳಿಗೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. </p> <p>ಬೇಕರಿ, ಮೊಬೈಲ್, ರೇಡಿಯಂ, ಹೋಟೆಲ್, ಲೇಡೀಸ್ ಕಾರ್ನರ್, ಪ್ಲಂಬರ್ ಸಾಮಾಗ್ರಿಗಳ ಅಂಗಡಿಗಳಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿ ಕೆನ್ನಾಲಿಗೆಗೆ ಅಂಗಡಿ ಮುಂಗಟ್ಟುಗಳಲ್ಲಿನ ಕೊಟ್ಯಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. </p>.<p><strong>ಅಗ್ನಿಶಾಮಕ ಠಾಣೆ ನಿರ್ಮಿಸದ ಇರುವುದಕ್ಕೆ ಜನರ ಆಕ್ರೋಶ:</strong></p><p>'ಪಟ್ಟಣ ಹಾಗೂ ಸಮೀಪದ ಕೈಗಾರಿಕಾ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗ್ನಿ ಅವಘಡ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರ, ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಈ ಭಾಗದಲ್ಲಿ ಒಂದು ಅಗ್ನಿ ಶಾಮಕ ದಳವನ್ನು ಸ್ಥಾಪನೆ ಮಾಡುತ್ತಿಲ್ಲ. ಇದರಿಂದ ಸುಮಾರು 35 ಕಿ. ಮೀ ದೂರದ ಯಾದಗಿರಿ ಜಿಲ್ಲಾ ಕೇಂದ್ರದಿಂದ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಎಲ್ಲವೂ ಸುಟ್ಟು ಹೋಗಿ ಬೂದಿ ಉಳಿಯುತ್ತಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಅನೇಕ ಬಾರಿ ಸಂಬಂಧಿಸಿದವರಿಗೆ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಮನವಿ ಸಲ್ಲಿಸಿದರೂ ಏನೂ ಪ್ರಯೋಜನವಾಗಿಲ್ಲ' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ (ಯಾದಗಿರಿ ಜಿಲ್ಲೆ):</strong> ಪಟ್ಟಣದಲ್ಲಿ ಭಾನುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮಳಿಗೆಗಳಿಗೆ ಬೆಂಕಿ ತಗುಲಿ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. </p>.<p>ಪಟ್ಟಣದ ಬಾಬು ಜಗಜೀವನರಾಂ ವೃತ್ತದ ಹತ್ತಿರದಲ್ಲಿ ಒಟ್ಟು 15 ಮಳಿಗೆಗಳ ಸಂಕೀರ್ಣದಲ್ಲಿ 9 ಮಳಿಗೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. </p> <p>ಬೇಕರಿ, ಮೊಬೈಲ್, ರೇಡಿಯಂ, ಹೋಟೆಲ್, ಲೇಡೀಸ್ ಕಾರ್ನರ್, ಪ್ಲಂಬರ್ ಸಾಮಾಗ್ರಿಗಳ ಅಂಗಡಿಗಳಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿ ಕೆನ್ನಾಲಿಗೆಗೆ ಅಂಗಡಿ ಮುಂಗಟ್ಟುಗಳಲ್ಲಿನ ಕೊಟ್ಯಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. </p>.<p><strong>ಅಗ್ನಿಶಾಮಕ ಠಾಣೆ ನಿರ್ಮಿಸದ ಇರುವುದಕ್ಕೆ ಜನರ ಆಕ್ರೋಶ:</strong></p><p>'ಪಟ್ಟಣ ಹಾಗೂ ಸಮೀಪದ ಕೈಗಾರಿಕಾ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗ್ನಿ ಅವಘಡ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರ, ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಈ ಭಾಗದಲ್ಲಿ ಒಂದು ಅಗ್ನಿ ಶಾಮಕ ದಳವನ್ನು ಸ್ಥಾಪನೆ ಮಾಡುತ್ತಿಲ್ಲ. ಇದರಿಂದ ಸುಮಾರು 35 ಕಿ. ಮೀ ದೂರದ ಯಾದಗಿರಿ ಜಿಲ್ಲಾ ಕೇಂದ್ರದಿಂದ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಎಲ್ಲವೂ ಸುಟ್ಟು ಹೋಗಿ ಬೂದಿ ಉಳಿಯುತ್ತಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಅನೇಕ ಬಾರಿ ಸಂಬಂಧಿಸಿದವರಿಗೆ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಮನವಿ ಸಲ್ಲಿಸಿದರೂ ಏನೂ ಪ್ರಯೋಜನವಾಗಿಲ್ಲ' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>