<p><strong>ಚಿತ್ತಾಪುರ</strong>: ತಾಲ್ಲೂಕಿನಲ್ಲಿ ಹರಿಯುತ್ತಿರುವ ಕಾಗಿಣಾ ನದಿಗೆ ಗುರುವಾರ ಸಂಜೆ ಉಕ್ಕೇರಿ ಬಂದ ಪ್ರವಾಹದಿಂದಾಗಿ ದಂಡೋತಿ ಗ್ರಾಮದ ಕಾಗಿಣಾ ಸೇತುವೆ ಮುಳುಗಡೆಯಾಗಿತ್ತು. ಶುಕ್ರವಾರ ಬೆಳಿಗ್ಗೆಯು ಸೇತುವೆ ಮೇಲೆ ಪ್ರವಾಹ ಹರಿಯುತ್ತಿದ್ದು ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. </p><p>ಸೇತುವೆಯು ಮುಳುಗಿದ ಸ್ಥಿತಿಯಲ್ಲಿರುವುದರಿಂದ ಸೇತುವೆಯ ಉತ್ತರಕ್ಕಿರುವ ಗ್ರಾಮಗಳಿಂದ ಪಟ್ಟಣವು ಸಂಪರ್ಕ ಕಡಿದುಕೊಂಡಿದೆ. ಅನೇಕ ಗ್ರಾಮಗಳಿಂದ ಬೆಳಿಗ್ಗೆ ಪಟ್ಟಣದ ಶಾಲಾ ಕಾಲೇಜುಗಳಿಗೆ ದಿನಾಲೂ ಆಗಮಿಸುತ್ತಿದ್ದ ವಿದ್ಯಾರ್ಥಿಗಳು ಶುಕ್ರವಾರ ಬರಲಾಗದೆ ಪರದಾಡಿದರು.</p><p>ಸೇಡಂ ತಾಲ್ಲೂಕಿನ ಮಳಖೇಡ ಹತ್ತಿರದ ಸೇತುವೆಯು ಮುಳುಗಡೆಯಾಗಿದ್ದರಿಂದ ಆ ಮಾರ್ಗದ ಸಂಚಾರ ಬಂದ್ ಆಗಿದೆ. ಚಿತ್ತಾಪುರ ತಾಲ್ಲೂಕಿನ ಅನೇಕ ಗ್ರಾಮಗಳ ಜನರು ಕಲಬುರಗಿಗೆ ಹೋಗಲು ಪರದಾಡಿದರು.</p><p>ದಂಡೋತಿ, ಮಲಕೂಡ, ತೊನಸನಹಳ್ಳಿ, ಗುಂಡಗುರ್ತಿ ಗ್ರಾಮಗಳು ಸೇರಿದಂತೆ ಅನೇಕ ಗ್ರಾಮಗಳಿಂದ ಕಲಬುರಗಿ ನಗರದ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.</p><p>ಚಿತ್ತಾಪುರದಿಂದ ಕಲಬುರಗಿಗೆ ಬಸ್ ಶಹಾಬಾದ್ ಮಾರ್ಗವಾಗಿ ಸಂಚರಿಸಿದವು. ಮಳೆ ಮತ್ತು ಪ್ರವಾಹದಿಂದ ಮೊಹರಂ ಹಬ್ಬದ ಸಂಭ್ರಮ ಕಳೆಗುಂದಿದೆ. ಇಂದು ಹಬ್ಬದ ಒಂಭತ್ತನೆ ದಿನವಾಗಿದ್ದರಿಂದ ಜನರು ಬೀಗರು, ನೆಂಟರು ಮಾಡುವ ಕಾರ್ಯಕ್ರಮಗಳಿಗೆ ಹೋಗಲಾಗದೆ ಸಮಸ್ಯೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ</strong>: ತಾಲ್ಲೂಕಿನಲ್ಲಿ ಹರಿಯುತ್ತಿರುವ ಕಾಗಿಣಾ ನದಿಗೆ ಗುರುವಾರ ಸಂಜೆ ಉಕ್ಕೇರಿ ಬಂದ ಪ್ರವಾಹದಿಂದಾಗಿ ದಂಡೋತಿ ಗ್ರಾಮದ ಕಾಗಿಣಾ ಸೇತುವೆ ಮುಳುಗಡೆಯಾಗಿತ್ತು. ಶುಕ್ರವಾರ ಬೆಳಿಗ್ಗೆಯು ಸೇತುವೆ ಮೇಲೆ ಪ್ರವಾಹ ಹರಿಯುತ್ತಿದ್ದು ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. </p><p>ಸೇತುವೆಯು ಮುಳುಗಿದ ಸ್ಥಿತಿಯಲ್ಲಿರುವುದರಿಂದ ಸೇತುವೆಯ ಉತ್ತರಕ್ಕಿರುವ ಗ್ರಾಮಗಳಿಂದ ಪಟ್ಟಣವು ಸಂಪರ್ಕ ಕಡಿದುಕೊಂಡಿದೆ. ಅನೇಕ ಗ್ರಾಮಗಳಿಂದ ಬೆಳಿಗ್ಗೆ ಪಟ್ಟಣದ ಶಾಲಾ ಕಾಲೇಜುಗಳಿಗೆ ದಿನಾಲೂ ಆಗಮಿಸುತ್ತಿದ್ದ ವಿದ್ಯಾರ್ಥಿಗಳು ಶುಕ್ರವಾರ ಬರಲಾಗದೆ ಪರದಾಡಿದರು.</p><p>ಸೇಡಂ ತಾಲ್ಲೂಕಿನ ಮಳಖೇಡ ಹತ್ತಿರದ ಸೇತುವೆಯು ಮುಳುಗಡೆಯಾಗಿದ್ದರಿಂದ ಆ ಮಾರ್ಗದ ಸಂಚಾರ ಬಂದ್ ಆಗಿದೆ. ಚಿತ್ತಾಪುರ ತಾಲ್ಲೂಕಿನ ಅನೇಕ ಗ್ರಾಮಗಳ ಜನರು ಕಲಬುರಗಿಗೆ ಹೋಗಲು ಪರದಾಡಿದರು.</p><p>ದಂಡೋತಿ, ಮಲಕೂಡ, ತೊನಸನಹಳ್ಳಿ, ಗುಂಡಗುರ್ತಿ ಗ್ರಾಮಗಳು ಸೇರಿದಂತೆ ಅನೇಕ ಗ್ರಾಮಗಳಿಂದ ಕಲಬುರಗಿ ನಗರದ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.</p><p>ಚಿತ್ತಾಪುರದಿಂದ ಕಲಬುರಗಿಗೆ ಬಸ್ ಶಹಾಬಾದ್ ಮಾರ್ಗವಾಗಿ ಸಂಚರಿಸಿದವು. ಮಳೆ ಮತ್ತು ಪ್ರವಾಹದಿಂದ ಮೊಹರಂ ಹಬ್ಬದ ಸಂಭ್ರಮ ಕಳೆಗುಂದಿದೆ. ಇಂದು ಹಬ್ಬದ ಒಂಭತ್ತನೆ ದಿನವಾಗಿದ್ದರಿಂದ ಜನರು ಬೀಗರು, ನೆಂಟರು ಮಾಡುವ ಕಾರ್ಯಕ್ರಮಗಳಿಗೆ ಹೋಗಲಾಗದೆ ಸಮಸ್ಯೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>