<p><strong>ವಡಗೇರಾ:</strong> ‘ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ ಒಳಗೊಂಡ ಕಿಟ್ ನೀಡುತ್ತಿರುವುದು ಸಂತ್ರಸ್ತ ಬಡ ಕುಟುಂಬದ ನಿರ್ವಹಣೆಗೆ ಅನುಕೂಲವಾಗಲಿದೆ’ ಎಂದು ಗ್ರಾ.ಪಂ ಪಿಡಿಒ ಸಿ.ಬಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಶಿವನೂರು ಗ್ರಾಮದ ನೆರೆ ಸಂತ್ರಸ್ತ ಕುಟುಂಬಗಳಿಗೆ ಉತ್ತರ ಕರ್ನಾಟಕದ ಪ್ರವಾಹ ಪರಿಹಾರ ಕಾರ್ಯಕ್ರಮ-2025ರ ಅಡಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಹಾಗೂ ರಾಮಕೃಷ್ಣ ಸೇವಾಶ್ರಮದ ಸಹಯೋಗದಲ್ಲಿ ಉಚಿತವಾಗಿ ಆಹಾರ ದಾನ್ಯಗಳ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮ ವ್ಯವಸ್ಥಾಪಕ ಮಹೇಶ್.ಬಿ ಮಾತನಾಡಿ, ‘ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ನಿರಂತರ ಮಳೆ ಹಾಗೂ ನೆರೆಯಿಂದಾಗಿ ಅಪಾರ ಹಾನಿಯಾಗಿದೆ. ಸಂತ್ರಸ್ತರಿಗೆ ಅಕ್ಕಿ, ತೊಗರಿ ಬೇಳೆ, ಗೋಧಿ ಹಿಟ್ಟು, ಉಪ್ಪು, ಸಕ್ಕರೆ, ಸೀರೆ ಸೇರಿದಂತೆ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಗ್ರಾಮದ ಮುಖಂಡ ವೆಂಕಟರೆಡ್ಡಿ ಗೌಡ, ಶಿವಕುಮಾರ, ಮುದಕನ್, ರವಿಚಂದ್ರನ ಚಟ್ನಹಳ್ಳಿ, ಮಾನಪ್ಪ ನಾಯ್ಕಲ್, ಹಣಮಂತ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ ಒಳಗೊಂಡ ಕಿಟ್ ನೀಡುತ್ತಿರುವುದು ಸಂತ್ರಸ್ತ ಬಡ ಕುಟುಂಬದ ನಿರ್ವಹಣೆಗೆ ಅನುಕೂಲವಾಗಲಿದೆ’ ಎಂದು ಗ್ರಾ.ಪಂ ಪಿಡಿಒ ಸಿ.ಬಿ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಶಿವನೂರು ಗ್ರಾಮದ ನೆರೆ ಸಂತ್ರಸ್ತ ಕುಟುಂಬಗಳಿಗೆ ಉತ್ತರ ಕರ್ನಾಟಕದ ಪ್ರವಾಹ ಪರಿಹಾರ ಕಾರ್ಯಕ್ರಮ-2025ರ ಅಡಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಹಾಗೂ ರಾಮಕೃಷ್ಣ ಸೇವಾಶ್ರಮದ ಸಹಯೋಗದಲ್ಲಿ ಉಚಿತವಾಗಿ ಆಹಾರ ದಾನ್ಯಗಳ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮ ವ್ಯವಸ್ಥಾಪಕ ಮಹೇಶ್.ಬಿ ಮಾತನಾಡಿ, ‘ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ನಿರಂತರ ಮಳೆ ಹಾಗೂ ನೆರೆಯಿಂದಾಗಿ ಅಪಾರ ಹಾನಿಯಾಗಿದೆ. ಸಂತ್ರಸ್ತರಿಗೆ ಅಕ್ಕಿ, ತೊಗರಿ ಬೇಳೆ, ಗೋಧಿ ಹಿಟ್ಟು, ಉಪ್ಪು, ಸಕ್ಕರೆ, ಸೀರೆ ಸೇರಿದಂತೆ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಗ್ರಾಮದ ಮುಖಂಡ ವೆಂಕಟರೆಡ್ಡಿ ಗೌಡ, ಶಿವಕುಮಾರ, ಮುದಕನ್, ರವಿಚಂದ್ರನ ಚಟ್ನಹಳ್ಳಿ, ಮಾನಪ್ಪ ನಾಯ್ಕಲ್, ಹಣಮಂತ ಸೇರಿದಂತೆ ಅನೇಕರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>