ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ: ಬ್ಯಾಂಕ್‍ನಿಂದ ₹ 10 ಲಕ್ಷ ದೇಣಿಗೆ

Last Updated 17 ಆಗಸ್ಟ್ 2019, 14:58 IST
ಅಕ್ಷರ ಗಾತ್ರ

ಯಾದಗಿರಿ: ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಕಲಬುರ್ಗಿಯ ಸರ್.ಎಂ.ವಿಶ್ವೇಶ್ವರಯ್ಯ ಸಹಕಾರ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹10 ಲಕ್ಷ ಚೆಕ್‍ ನೀಡಲಾಯಿತು.

ಬ್ಯಾಂಕ್ ಅಧ್ಯಕ್ಷ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ಗೆ ಚೆಕ್ ಹಸ್ತಾಂತರಿಸಿದರು.

ಶಾಸಕರು ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳ ಸ್ಥಿತಿಗತಿ, ಜನತೆಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಹಾಗೂ ರೈತರ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದರು.

ಸಹಕಾರ ಬ್ಯಾಂಕ್‍ನ ನಿರ್ದೇಶಕ ವಿಜಯಕುಮಾರ ಮುಲುಗೆ, ಸದಾಶಿವರೆಡ್ಡಿ ಹಳಿಸಗರ, ಅಲ್ಲಾಬಕ್ಷ ನೂರಪಟೇಲ್, ಎಚ್.ಎಸ್.ರೆಡ್ಡಿ, ಶರಣಗೌಡ ಗುಂಡಗುರ್ತಿ, ಶ್ರೀನಿವಾಸರೆಡ್ಡಿ ಕಂದಕೂರ, ಬಸವರಾಜಪ್ಪಗೌಡ ವಡಗೇರಾ, ಡಾ.ಅಮರಣ್ಣ ಗಡ್ಡೆಸೂಗುರ, ಮಾಣಿಕರೆಡ್ಡಿ ಕುರಕುಂದಿ, ಮಹ್ಮದ ಜಿಲಾನಿ, ಸುರೇಶ ಜೈನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT