ಇದರಿಂದಾಗಿ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಬುಧವಾರ ಬೆಳಿಗ್ಗೆ 85 ಸಾವಿರ ಇದ್ದ ಒಳಹರಿವು ಗುರುವಾರ ಬೆಳಿಗ್ಗೆ ಹೊತ್ತಿಗೆ 95 ಸಾವಿರಕ್ಕೆ ಏರಿಕೆಯಗಿತ್ತು. ಸಂಜೆ 6 ಗಂಟೆಗೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಇದರಿಂದಾಗಿ ಜಲಾಶಯದ ಮಟ್ಟ 491.28 ಕಾಯ್ದುಕೊಂಡು 22 ಗೇಟ್ಗಳ ಮುಖಾಂತರ 1.35 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.