ಯರಗೋಳ ಸಮೀಪದ ಠಾಣಗುಂದಿ ಗ್ರಾಮದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್ಸ್ ವತಿಯಿಂದ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲಿಕೆ ಸಂಸ್ಥೆಯ ಪೌಷ್ಟಿಕ ಕಾರ್ಯಕ್ರಮ ಸಂಯೋಜಕ ಶಿವರಾಜನಾಯಕ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪೌಷ್ಟಿಕ ಆಹಾರ ಅವಶ್ಯಕವಿದೆ ಎಂದರು. ಕಲಿಕೆ ಸಂಸ್ಥೆಯ ಮೂರ್ತಿ, ಗ್ರಾಮಸ್ಥರು ಇದ್ದರು.