ಯಾದಗಿರಿ: ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರಿಗೆ ವಿತರಿಸುತ್ತಿರುವ ಆಹಾರ ಕಿಟ್ಗೆ ನೂಕುನುಗ್ಗಲು ಉಂಟಾಗಿದೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬುಧವಾರ ಬೆಳಿಗ್ಗೆಯಿಂದ ಜನರು ಸರದಿಯಲ್ಲಿ ನಿಂತುಕೊಂಡಿದ್ದಾರೆ.
ಪುರುಷ, ಮಹಿಳೆಯರಿಗೆ ಪ್ರತ್ಯೇಕ ಸಾಲು ಮಾಡಿದ್ದರೂ ಜನರು ಹೆಚ್ಚಾಗಿರುವ ಕಾರಣ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಪೊಲೀಸರೊಬ್ಬರು ಮಹಿಳೆಯನ್ನು ತಳ್ಳಿರುವುದು ಕಂಡು ಬಂದಿದೆ.
ಕೋವಿಡ್ ನಿಯಮ ಗಾಳಿಗೆ:ಆಹಾರ ಧಾನ್ಯ ಕಿಟ್ ಪಡೆಯಲು ಕಾರ್ಮಿಕರು ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಮಾಸ್ಕ್ ಧರಿಸಿಲ್ಲ, ಅಂತರವೂ ಕಾಪಾಡಿಕೊಂಡಿಲ್ಲ.