<blockquote>2.19 ಲಕ್ಷ ಜಾನುವಾರುಗಳಿಗೆ ಲಸಿಕೆ | ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ | 265 ಲಸಿಕೆದಾರರ ನೇಮಕ</blockquote>.<p><strong>ಯಾದಗಿರಿ:</strong> ‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ತಗುಲಬಹುದಾದ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಎಂಟನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ-2025 ಕುರಿತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಎತ್ತು, ಹೋರಿ, ಹಸು, ಎಮ್ಮೆ ಗಳಿಗೆ ತಗಲುವ ಮಾರಕ ಕಾಲುಬಾಯಿ ರೋಗವನ್ನು ನಿಯಂತ್ರಣ ಮಾಡಬೇಕು. ಇಲ್ಲದೆ ಇದ್ದರೆ ಜಾನುವಾರುಗಳಿಗೆ ಜೀವಹಾನಿಯಾಗಿ ರೈತರಿಗೆ ಆರ್ಥಿಕ ಸಂಕಷ್ಟ ಉಂಟಾಗುತ್ತದೆ’ ಎಂದರು. </p>.<p>‘2025ನೇ ಸಾಲಿನ ಎಂಟನೇ ಸುತ್ತಿನ ಕಾಲು ಬಾಯಿ ರೋಗ ನಿಯಂತ್ರಣಕ್ಕಾಗಿ ಜಾನುವಾರುಗಳಿಗೆ ನವೆಂಬರ್ 3ರಿಂದ ಡಿಸೆಂಬರ್ 2ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಾದ್ಯಂತ ಗುರುತಿಸಲಾದ 2.19 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ರೈತರು ಸಹ ಈ ಕಾರ್ಯಕ್ರಮಕ್ಕೆ ಸಹಕಾರ ಕೊಡಬೇಕು’ ಎಂದು ಹೇಳಿದರು. </p>.<p>‘ರೈತರು ಹಾಗೂ ಹೈನುಗಾರರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕುವಾರು ಪ್ರತಿ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಅವಶ್ಯಕ ಔಷಧಿಯನ್ನು ಸಹ ಇಟ್ಟುಕೊಳ್ಳಬೇಕು. ಪಶುವೈದ್ಯರು, ಪಶುಸಖಿಯರು ಕಾಳಜಿಯಿಂದ ಕಾರ್ಯನಿರ್ವಹಿಸಿ ಜಾನುವಾರುಗಳಿಗೆ ಲಸಿಕೆ ಹಾಕಬೇಕು’ ಎಂದು ಸೂಚಿಸಿದರು. </p>.<p>ಸಭೆಯಲ್ಲಿ ಮಾತನಾಡಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ರಾಜು ದೇಶಮುಖ, ‘ಜಿಲ್ಲೆಯ 2.19 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ 2.25 ಲಸಿಕೆ ಸರಬರಾಜು ಮಾಡಲಾಗುತ್ತಿದ್ದು, 265 ಲಸಿಕೆದಾರರನ್ನು ನೇಮಕ ಮಾಡಿಕೊಳ್ಳಲಾಗಿದೆ’ ಎಂದರು.</p>.<p>‘ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. 8ನೇ ಸುತ್ತಿನಲ್ಲಿರುವುದು ರಾಷ್ಟ್ರದ ಏಕೈಕ ರಾಜ್ಯ ಕರ್ನಾಟಕ ಮಾತ್ರ. ಪ್ರತಿ ಗ್ರಾಮಗಳಲ್ಲಿ ಲಸಿಕೆ ಮಾಡುವ ವೇಳಾಪಟ್ಟಿಯನ್ನು ನೀಡಲಾಗುವುದು. ಕಾಲು ಬಾಯಿ ರೋಗದಿಂದ ಜಾನುವಾರು ಗುಣ ಮುಖವಾದರೂ ಮುಂದೆ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ಮತ್ತು ಇಳುವರಿಯಲ್ಲಿ ಇಳಿಮುಖವಾಗುವುದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ’ ಎಂದು ಹೇಳಿದರು.</p>.<p>‘ಮೂರು ತಿಂಗಳು ಮೇಲ್ಪಟ್ಟ ಎತ್ತು, ಹೋರಿ, ಹಸು ಹಾಗೂ ಎಮ್ಮೆಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ. ಸುರಕ್ಷತೆಗೆ ಕನಿಷ್ಠ ಎರಡು ಬಾರಿ ಲಸಿಕೆ ಹಾಕಿಸಬೇಕು. ಜಾತ್ರೆ ಅಥವಾ ಸಂತೆಗಳಲ್ಲಿ ಜಾನುವಾರುಗಳಿಗೆ ಕನಿಷ್ಠ 21 ದಿನಗಳ ಹಿಂದೆಯೇ ಲಸಿಕೆ ಮಾಡಿದ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ರೈತರು ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು’ ಎಂದು ಕೋರಿದರು.</p>.<p>ಇದೇ ವೇಳೆ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಪಶುವೈದ್ಯರು, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>2.19 ಲಕ್ಷ ಜಾನುವಾರುಗಳಿಗೆ ಲಸಿಕೆ | ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ | 265 ಲಸಿಕೆದಾರರ ನೇಮಕ</blockquote>.<p><strong>ಯಾದಗಿರಿ:</strong> ‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ತಗುಲಬಹುದಾದ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಎಂಟನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ-2025 ಕುರಿತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಎತ್ತು, ಹೋರಿ, ಹಸು, ಎಮ್ಮೆ ಗಳಿಗೆ ತಗಲುವ ಮಾರಕ ಕಾಲುಬಾಯಿ ರೋಗವನ್ನು ನಿಯಂತ್ರಣ ಮಾಡಬೇಕು. ಇಲ್ಲದೆ ಇದ್ದರೆ ಜಾನುವಾರುಗಳಿಗೆ ಜೀವಹಾನಿಯಾಗಿ ರೈತರಿಗೆ ಆರ್ಥಿಕ ಸಂಕಷ್ಟ ಉಂಟಾಗುತ್ತದೆ’ ಎಂದರು. </p>.<p>‘2025ನೇ ಸಾಲಿನ ಎಂಟನೇ ಸುತ್ತಿನ ಕಾಲು ಬಾಯಿ ರೋಗ ನಿಯಂತ್ರಣಕ್ಕಾಗಿ ಜಾನುವಾರುಗಳಿಗೆ ನವೆಂಬರ್ 3ರಿಂದ ಡಿಸೆಂಬರ್ 2ರವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಾದ್ಯಂತ ಗುರುತಿಸಲಾದ 2.19 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ರೈತರು ಸಹ ಈ ಕಾರ್ಯಕ್ರಮಕ್ಕೆ ಸಹಕಾರ ಕೊಡಬೇಕು’ ಎಂದು ಹೇಳಿದರು. </p>.<p>‘ರೈತರು ಹಾಗೂ ಹೈನುಗಾರರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕುವಾರು ಪ್ರತಿ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಅವಶ್ಯಕ ಔಷಧಿಯನ್ನು ಸಹ ಇಟ್ಟುಕೊಳ್ಳಬೇಕು. ಪಶುವೈದ್ಯರು, ಪಶುಸಖಿಯರು ಕಾಳಜಿಯಿಂದ ಕಾರ್ಯನಿರ್ವಹಿಸಿ ಜಾನುವಾರುಗಳಿಗೆ ಲಸಿಕೆ ಹಾಕಬೇಕು’ ಎಂದು ಸೂಚಿಸಿದರು. </p>.<p>ಸಭೆಯಲ್ಲಿ ಮಾತನಾಡಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ರಾಜು ದೇಶಮುಖ, ‘ಜಿಲ್ಲೆಯ 2.19 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ 2.25 ಲಸಿಕೆ ಸರಬರಾಜು ಮಾಡಲಾಗುತ್ತಿದ್ದು, 265 ಲಸಿಕೆದಾರರನ್ನು ನೇಮಕ ಮಾಡಿಕೊಳ್ಳಲಾಗಿದೆ’ ಎಂದರು.</p>.<p>‘ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. 8ನೇ ಸುತ್ತಿನಲ್ಲಿರುವುದು ರಾಷ್ಟ್ರದ ಏಕೈಕ ರಾಜ್ಯ ಕರ್ನಾಟಕ ಮಾತ್ರ. ಪ್ರತಿ ಗ್ರಾಮಗಳಲ್ಲಿ ಲಸಿಕೆ ಮಾಡುವ ವೇಳಾಪಟ್ಟಿಯನ್ನು ನೀಡಲಾಗುವುದು. ಕಾಲು ಬಾಯಿ ರೋಗದಿಂದ ಜಾನುವಾರು ಗುಣ ಮುಖವಾದರೂ ಮುಂದೆ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ಮತ್ತು ಇಳುವರಿಯಲ್ಲಿ ಇಳಿಮುಖವಾಗುವುದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ’ ಎಂದು ಹೇಳಿದರು.</p>.<p>‘ಮೂರು ತಿಂಗಳು ಮೇಲ್ಪಟ್ಟ ಎತ್ತು, ಹೋರಿ, ಹಸು ಹಾಗೂ ಎಮ್ಮೆಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ. ಸುರಕ್ಷತೆಗೆ ಕನಿಷ್ಠ ಎರಡು ಬಾರಿ ಲಸಿಕೆ ಹಾಕಿಸಬೇಕು. ಜಾತ್ರೆ ಅಥವಾ ಸಂತೆಗಳಲ್ಲಿ ಜಾನುವಾರುಗಳಿಗೆ ಕನಿಷ್ಠ 21 ದಿನಗಳ ಹಿಂದೆಯೇ ಲಸಿಕೆ ಮಾಡಿದ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ರೈತರು ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು’ ಎಂದು ಕೋರಿದರು.</p>.<p>ಇದೇ ವೇಳೆ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಪಶುವೈದ್ಯರು, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>