ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.