<p><strong>ಯಾದಗಿರಿ: </strong>ನಗರ ಹೊರವಲಯದ ಭೀಮಾ ನದಿಯಲ್ಲಿ ಭಾನುವಾರ ಈಜಲು ತೆರಳಿದ್ದ ನಾಲ್ವರ ಬಾಲಕರ ಮೃತದೇಹಗಳು ಸೋಮವಾರ ಬೆಳಿಗ್ಗೆ ಪತ್ತೆಯಾಗಿವೆ.</p>.<p>ನಗರದ ಅಜೀಜ್ ಕಾಲೊನಿಯ ಅಮನ್ (16), ಅಯಾನ್ (16), ರೆಹಮಾನ್ (16),<br />ಕಲಬುರ್ಗಿಯ ರೆಹಮಾನ್ (16) ಸಾವನ್ನಪ್ಪಿದವರು.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ, ಎನ್ಡಿಆರ್ಎಫ್ ತಂಡ, ರಾಷ್ಟ್ರೀಯ ಗೃಹರಕ್ಷಕ ದಳ, ಸ್ಥಳೀಯ ಮೀನುಗಾರರು ಕಾರ್ಯಾಚರಣೆ ನಡೆಸಿದ್ದರು. ಸ್ಥಳೀಯ ಮೀನುಗಾರರಾದ ತಾಯಪ್ಪ ತಾಂಡೂರಕರ, ಅಂಬರೇಶ್ ತಾಂಡೂರಕರ, ಮಲ್ಲಪ್ಪ ಜಾಲಗಾರ, ಮಲ್ಲಪ್ಪ ಕೋಟಿಮನಿ, ಕೃಷ್ಣಪ್ಪ, ಶುಭಾಷ ಜಾಲಗಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.</p>.<p>ಭಾನುವಾರ ಕತ್ತಲಾಗುವವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಮತ್ತೆ ಸೋಮವಾರ ಬೆಳಿಗ್ಗೆ ಕಾರ್ಯಾ ಚರಣೆ ನಡೆಸಲಾಗಿ ಮೃತದೇಹ ಪತ್ತೆಯಾಗಿವೆ. ಬಾಲಕರು ನೀರುಪಾಲಾಗಿ ರುವ ಘಟನೆ ಭಾನುವಾರ ಸಂಜೆ ಸುಮಾರು 5.30ಕ್ಕೆ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗಿತ್ತು. ಹೈದರಬಾದ್ನಿಂದ 16 ಜನ ಎನ್ಡಿಆರ್ಎಫ್ತಂಡ 4 ಬೋಟ್ಸ್ ತಂದು ಕಾರ್ಯಾಚರಣೆಮಾಡಲಾಗಿತ್ತು.</p>.<p>‘ಕಾರ್ಯಾಚರಣೆ ಮೂಲಕ ಬಾಲಕರ ಮೃತದೇಹಗಳನ್ನು ಹೊರತೆಗೆದು ನಿಯಮಾನುಸಾರ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾಹಿತಿ ನೀಡಿದರು.</p>.<p>‘ಜಿಲ್ಲಾಧಿಕಾರಿ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ ಗುರುಸುಣಗಿ ಬ್ರಿಡ್ಜ್ ಬಳಿ ಎಚ್ಚರಿಕೆ ಸಂದೇಶದ ನಾಮಫಲಕ ಅಳವಡಿಸಲಾಗುವುದು. ಸುತ್ತಮತ್ತಲು ತಂತಿ ಬೇಲಿ ಅಳವಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>***</p>.<p>ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದು ನಿಯಮಾನುಸಾರ ಮರಣೋತ್ತರ ಪರೀಕ್ಷೆ ಮಾಡಿ ಬಾಲಕರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ<br />ಡಾ.ರಾಗಪ್ರಿಯಾ ಆರ್.,ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ನಗರ ಹೊರವಲಯದ ಭೀಮಾ ನದಿಯಲ್ಲಿ ಭಾನುವಾರ ಈಜಲು ತೆರಳಿದ್ದ ನಾಲ್ವರ ಬಾಲಕರ ಮೃತದೇಹಗಳು ಸೋಮವಾರ ಬೆಳಿಗ್ಗೆ ಪತ್ತೆಯಾಗಿವೆ.</p>.<p>ನಗರದ ಅಜೀಜ್ ಕಾಲೊನಿಯ ಅಮನ್ (16), ಅಯಾನ್ (16), ರೆಹಮಾನ್ (16),<br />ಕಲಬುರ್ಗಿಯ ರೆಹಮಾನ್ (16) ಸಾವನ್ನಪ್ಪಿದವರು.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ, ಎನ್ಡಿಆರ್ಎಫ್ ತಂಡ, ರಾಷ್ಟ್ರೀಯ ಗೃಹರಕ್ಷಕ ದಳ, ಸ್ಥಳೀಯ ಮೀನುಗಾರರು ಕಾರ್ಯಾಚರಣೆ ನಡೆಸಿದ್ದರು. ಸ್ಥಳೀಯ ಮೀನುಗಾರರಾದ ತಾಯಪ್ಪ ತಾಂಡೂರಕರ, ಅಂಬರೇಶ್ ತಾಂಡೂರಕರ, ಮಲ್ಲಪ್ಪ ಜಾಲಗಾರ, ಮಲ್ಲಪ್ಪ ಕೋಟಿಮನಿ, ಕೃಷ್ಣಪ್ಪ, ಶುಭಾಷ ಜಾಲಗಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.</p>.<p>ಭಾನುವಾರ ಕತ್ತಲಾಗುವವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಮತ್ತೆ ಸೋಮವಾರ ಬೆಳಿಗ್ಗೆ ಕಾರ್ಯಾ ಚರಣೆ ನಡೆಸಲಾಗಿ ಮೃತದೇಹ ಪತ್ತೆಯಾಗಿವೆ. ಬಾಲಕರು ನೀರುಪಾಲಾಗಿ ರುವ ಘಟನೆ ಭಾನುವಾರ ಸಂಜೆ ಸುಮಾರು 5.30ಕ್ಕೆ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗಿತ್ತು. ಹೈದರಬಾದ್ನಿಂದ 16 ಜನ ಎನ್ಡಿಆರ್ಎಫ್ತಂಡ 4 ಬೋಟ್ಸ್ ತಂದು ಕಾರ್ಯಾಚರಣೆಮಾಡಲಾಗಿತ್ತು.</p>.<p>‘ಕಾರ್ಯಾಚರಣೆ ಮೂಲಕ ಬಾಲಕರ ಮೃತದೇಹಗಳನ್ನು ಹೊರತೆಗೆದು ನಿಯಮಾನುಸಾರ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾಹಿತಿ ನೀಡಿದರು.</p>.<p>‘ಜಿಲ್ಲಾಧಿಕಾರಿ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ ಗುರುಸುಣಗಿ ಬ್ರಿಡ್ಜ್ ಬಳಿ ಎಚ್ಚರಿಕೆ ಸಂದೇಶದ ನಾಮಫಲಕ ಅಳವಡಿಸಲಾಗುವುದು. ಸುತ್ತಮತ್ತಲು ತಂತಿ ಬೇಲಿ ಅಳವಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>***</p>.<p>ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದು ನಿಯಮಾನುಸಾರ ಮರಣೋತ್ತರ ಪರೀಕ್ಷೆ ಮಾಡಿ ಬಾಲಕರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ<br />ಡಾ.ರಾಗಪ್ರಿಯಾ ಆರ್.,ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>