<p><strong>ಯರಗೋಳ</strong>: ಮಾನವನ ಪಂಚೇಂದ್ರಿಯಗಳಲ್ಲಿ ಕಣ್ಣು ಬಹುಮುಖ್ಯವಾದ ಅಂಗ. ಇದನ್ನು ಅತ್ಯಂತ ಕಾಳಜಿಯಿಂದ ಆರೈಕೆ ಮಾಡಿಕೊಂಡಾಗ ಮಾತ್ರ ನಿಸರ್ಗದ ಸೌಂದರ್ಯ ಸವಿಯಲು ಸಾಧ್ಯ ಎಂದು ನೇತ್ರಾಧಿಕಾರಿ ಉಮೇಶ ಹೇಳಿದರು.</p>.<p>ಕಲಿಕೆ ಟಾಟಾ ಟ್ರಸ್ಟ್ ಸಂಸ್ಥೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಗ್ರಾಮ ಹಿರಿಯರ ಕೇಂದ್ರದಲ್ಲಿ ಹಿರಿಯರಿಗೆ ಏರ್ಪಡಿಸಿದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ವಿಜಯಕುಮಾರ ಮಾತನಾಡಿ, ತಂಬಾಕು, ಜರ್ದಾ, ಮದ್ಯಪಾನ ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಿದರು.</p>.<p>ಕಲಿಕೆ ಸಂಸ್ಥೆಯ ಹಿರಿಯ ಕಾರ್ಯಕ್ರಮ ಸಂಯೋಜಕ ಮರೆಪ್ಪ ನಂದಿಹಳ್ಳಿ ಮಾತನಾಡಿದರು.</p>.<p>ಶಿಬಿರದಲ್ಲಿ 40ಕ್ಕು ಹೆಚ್ಚು ಹಿರಿಯ ನಾಗರಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ಮಾಡಿಸಲಾಯಿತು. 26 ಜನ ಹಿರಿಯ ನಾಗರಿಕರಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಶಸ್ತ್ರ ಚಿಕಿತ್ಸೆಗೆ ಅರ್ಹ ಇರುವ ಕೆಲವು ಹಿರಿಯರಿಗೆ ಜಿಲ್ಲಾ ಆಸ್ಪತ್ರೆಗೆ ಹೋಗಲು ಸಲಹೆ ನೀಡಲಾಯಿತು.</p>.<p>ಗ್ರಾ.ಪಂ ಕರವಸುಲಿಗಾರ ಮಲ್ಲಿಕಾರ್ಜುನ, ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ವಿಜಯಕುಮಾರ, ನೇತ್ರಾಧಿಕಾರಿ ಉಮೇಶ, ಕಲಿಕೆ ಸಂಸ್ಥೆಯ ಪ್ರೇರಕ ಜಗದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗೋಳ</strong>: ಮಾನವನ ಪಂಚೇಂದ್ರಿಯಗಳಲ್ಲಿ ಕಣ್ಣು ಬಹುಮುಖ್ಯವಾದ ಅಂಗ. ಇದನ್ನು ಅತ್ಯಂತ ಕಾಳಜಿಯಿಂದ ಆರೈಕೆ ಮಾಡಿಕೊಂಡಾಗ ಮಾತ್ರ ನಿಸರ್ಗದ ಸೌಂದರ್ಯ ಸವಿಯಲು ಸಾಧ್ಯ ಎಂದು ನೇತ್ರಾಧಿಕಾರಿ ಉಮೇಶ ಹೇಳಿದರು.</p>.<p>ಕಲಿಕೆ ಟಾಟಾ ಟ್ರಸ್ಟ್ ಸಂಸ್ಥೆಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಗ್ರಾಮ ಹಿರಿಯರ ಕೇಂದ್ರದಲ್ಲಿ ಹಿರಿಯರಿಗೆ ಏರ್ಪಡಿಸಿದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ವಿಜಯಕುಮಾರ ಮಾತನಾಡಿ, ತಂಬಾಕು, ಜರ್ದಾ, ಮದ್ಯಪಾನ ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಉಪನ್ಯಾಸ ನೀಡಿದರು.</p>.<p>ಕಲಿಕೆ ಸಂಸ್ಥೆಯ ಹಿರಿಯ ಕಾರ್ಯಕ್ರಮ ಸಂಯೋಜಕ ಮರೆಪ್ಪ ನಂದಿಹಳ್ಳಿ ಮಾತನಾಡಿದರು.</p>.<p>ಶಿಬಿರದಲ್ಲಿ 40ಕ್ಕು ಹೆಚ್ಚು ಹಿರಿಯ ನಾಗರಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ಮಾಡಿಸಲಾಯಿತು. 26 ಜನ ಹಿರಿಯ ನಾಗರಿಕರಿಗೆ ಉಚಿತ ಕನ್ನಡಕ ವಿತರಿಸಲಾಯಿತು. ಶಸ್ತ್ರ ಚಿಕಿತ್ಸೆಗೆ ಅರ್ಹ ಇರುವ ಕೆಲವು ಹಿರಿಯರಿಗೆ ಜಿಲ್ಲಾ ಆಸ್ಪತ್ರೆಗೆ ಹೋಗಲು ಸಲಹೆ ನೀಡಲಾಯಿತು.</p>.<p>ಗ್ರಾ.ಪಂ ಕರವಸುಲಿಗಾರ ಮಲ್ಲಿಕಾರ್ಜುನ, ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ವಿಜಯಕುಮಾರ, ನೇತ್ರಾಧಿಕಾರಿ ಉಮೇಶ, ಕಲಿಕೆ ಸಂಸ್ಥೆಯ ಪ್ರೇರಕ ಜಗದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>