<p><strong>ಯಾದಗಿರಿ: </strong>ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ತಿರಸ್ಕರಿಸಿ ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದವರಿಗೆ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇದೇ ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಪ್ರಕಟಿಸಲಾಗಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 90 ಪದವಿ ಪೂರ್ವ ಕಾಲೇಜುಗಳನ್ನು ಒಳಗೊಂಡಂತೆ 496 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮೂರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ಆರೋಗ್ಯ ಸಲಕರಣೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧ ಪ್ರದೇಶ ಎಂದು ಜಿಲ್ಲಾಧಿಕಾರಿ ಘೋಷಿಸಿದರು. ಸುತ್ತಲಿನ ಜಿರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಿದರು.</p>.<p>ಪರೀಕ್ಷಾ ಕೇಂದ್ರಗಳಲ್ಲಿ ವಾಟರ್ ಬಾಯ್ಗಳ ನೇಮಕ ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು ಎಂದರು.</p>.<p>ಕೇಂದ್ರದ ಮುಖ್ಯ ಅಧಿಕ್ಷಕರು ‘ಬೆಸಿಕ್ ಸೆಟ್’ ಫೋನ್ ಮಾತ್ರ ಬಳಸಬಹುದು. ಆದರೆ ಸ್ಮಾರ್ಟ್ ಫೋನ್ ತರುವುದು ನಿಷೇಧಿಸಿದೆ ಎಂದು ಸೂಚಿಸಿದರು.</p>.<p>ಪರೀಕ್ಷಾ ಗೌಪ್ಯ ಕಾರ್ಯಗಳಿಗೆ ಬಳಸಲಾಗುವ ವಾಹನಗಳಿಗೆ ಪರೀಕ್ಷೆ ಮುಂಚಿತವಾಗಿ ಜಿಪಿಎಸ್ ಅಳವಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ಮತ್ತು ಪರೀಕ್ಷೆಯ ನಂತರ ಹೊರಬರುವಾಗ ಗುಂಪುಗೂಡದಂತೆ ಜಾಗೃತೆ ವಹಿಸಬೇಕು. ಪರೀಕ್ಷಾ ಸಿಬ್ಬಂದಿ ಸಹಿತ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಹಿಳ್ಳಿ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಮತ್ತು ಕಾಲೇಜಿನ ಉಪನ್ಯಾಸಕರು, ಜಿಲ್ಲೆಯ ಶಿಕ್ಷಣಾಧಿಕಾರಿ, ತಹಶೀಲ್ದಾರರು, ಪೊಲೀಸ್ ಸಿಬ್ಬಂದಿ ಇದ್ದರು.</p>.<p>***</p>.<p>ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ</p>.<p><strong>- ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ತಿರಸ್ಕರಿಸಿ ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದವರಿಗೆ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇದೇ ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಪ್ರಕಟಿಸಲಾಗಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 90 ಪದವಿ ಪೂರ್ವ ಕಾಲೇಜುಗಳನ್ನು ಒಳಗೊಂಡಂತೆ 496 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದರು.</p>.<p>ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮೂರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ಆರೋಗ್ಯ ಸಲಕರಣೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧ ಪ್ರದೇಶ ಎಂದು ಜಿಲ್ಲಾಧಿಕಾರಿ ಘೋಷಿಸಿದರು. ಸುತ್ತಲಿನ ಜಿರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಿದರು.</p>.<p>ಪರೀಕ್ಷಾ ಕೇಂದ್ರಗಳಲ್ಲಿ ವಾಟರ್ ಬಾಯ್ಗಳ ನೇಮಕ ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು ಕೊಠಡಿಗಳ ಅಂತರದಲ್ಲಿ ಕೊಠಡಿಯ ಹೊರಗೆ ವ್ಯವಸ್ಥೆ ಮಾಡಬೇಕು ಎಂದರು.</p>.<p>ಕೇಂದ್ರದ ಮುಖ್ಯ ಅಧಿಕ್ಷಕರು ‘ಬೆಸಿಕ್ ಸೆಟ್’ ಫೋನ್ ಮಾತ್ರ ಬಳಸಬಹುದು. ಆದರೆ ಸ್ಮಾರ್ಟ್ ಫೋನ್ ತರುವುದು ನಿಷೇಧಿಸಿದೆ ಎಂದು ಸೂಚಿಸಿದರು.</p>.<p>ಪರೀಕ್ಷಾ ಗೌಪ್ಯ ಕಾರ್ಯಗಳಿಗೆ ಬಳಸಲಾಗುವ ವಾಹನಗಳಿಗೆ ಪರೀಕ್ಷೆ ಮುಂಚಿತವಾಗಿ ಜಿಪಿಎಸ್ ಅಳವಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.</p>.<p>ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ಮತ್ತು ಪರೀಕ್ಷೆಯ ನಂತರ ಹೊರಬರುವಾಗ ಗುಂಪುಗೂಡದಂತೆ ಜಾಗೃತೆ ವಹಿಸಬೇಕು. ಪರೀಕ್ಷಾ ಸಿಬ್ಬಂದಿ ಸಹಿತ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಹಿಳ್ಳಿ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಮತ್ತು ಕಾಲೇಜಿನ ಉಪನ್ಯಾಸಕರು, ಜಿಲ್ಲೆಯ ಶಿಕ್ಷಣಾಧಿಕಾರಿ, ತಹಶೀಲ್ದಾರರು, ಪೊಲೀಸ್ ಸಿಬ್ಬಂದಿ ಇದ್ದರು.</p>.<p>***</p>.<p>ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ</p>.<p><strong>- ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>