ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಹುಂಡೆಕಲ್ ಗ್ರಾಮದ ಬಳಿ ಭಾನುವಾರ ಹೊಲವೊಂದರಲ್ಲಿ ಇಸ್ಪೀಟ್ (ಜೂಜು) ಆಟ ಆಡುತ್ತಿದ್ದಾಗ ಸುರಪುರ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಗಳಿಂದ ₹1.40 ಲಕ್ಷ ಹಣ ಜಪ್ತಿ ಮಾಡಿಕೊಂಡಿದ್ದಾರೆ.
ಶಹಾಪುರ ಠಾಣೆಯಲ್ಲಿ 10 ಜನ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.