<p><strong>ಯಾದಗಿರಿ</strong>: ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು ಹತ್ತು ಜನರನ್ನು ಬಂಧಿಸಿ ಜೂಜಾಟಕ್ಕಿಟ್ಟಿದ್ದ ₹18,390 ನಗದುವಶಪಡಿಸಿಕೊಂಡ ಘಟನೆ ಗುರುಮಠಕಲ್ನಲ್ಲಿ ಗುರುವಾರ ನಡೆದಿದೆ.</p><p>ಇಲ್ಲಿನ ಎಪಿಎಂಸಿ ಹತ್ತಿರದ ಖುಲ್ಲಾ ಜಾಗದಲ್ಲಿ ಜೂಜಾಟ ಆಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ದಾಳಿ ಮಾಡಿದ ಪಿಐ ವೀರಣ್ಣ ದೊಡ್ಡಮನಿ ನೇತೃತ್ವದ ತಂಡ ಜೂಜುಕೋರರನ್ನು ಬಂಧಿಸಿ, ಹಣ ಜಪ್ತಿ ಮಾಡಿದೆ.</p><p>ರವಿಕುಮಾರ ಕೊಟಕುಂಡಾ, ಪಿತಾಂಬರ ಕಾಟಿಗ, ರಾಜೇಶ, ಶರಣಪ್ಪ, ತುಳಸಿರಾಂ ರಾಠೋಡ್, ಶಿವಕುಮಾರ, ಭಾಸ್ಕರ್, ರಾಮು ರಾಠೋಡ್, ಪ್ರಕಾಶ ನಿರೇಟಿ ಮತ್ತು ಬಾಲಪ್ಪ ನಿರೇಟಿ ಎಂಬುವವರೇ ಜೂಜಾಟದಲ್ಲಿ ತೊಡಗಿದ್ದರು. ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಇತ್ತೀಚಿಗೆ ಗುರುಮಠಕಲ್ ಪಟ್ಟಣ ಸೇರಿದಂತೆಯೇ ತಾಲ್ಲೂಕಿನ ಬಹುತೇಕ ಹಳ್ಳಿಗಳಲ್ಲಿ ಜೂಜಾಟ ಮತ್ತು ಮಟಕಾ ಹಾವಳಿ ಜಾಸ್ತಿಯಾಗಿದ್ದರ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಈ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಶೇಷ ತಂಡ ರಚಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು ಹತ್ತು ಜನರನ್ನು ಬಂಧಿಸಿ ಜೂಜಾಟಕ್ಕಿಟ್ಟಿದ್ದ ₹18,390 ನಗದುವಶಪಡಿಸಿಕೊಂಡ ಘಟನೆ ಗುರುಮಠಕಲ್ನಲ್ಲಿ ಗುರುವಾರ ನಡೆದಿದೆ.</p><p>ಇಲ್ಲಿನ ಎಪಿಎಂಸಿ ಹತ್ತಿರದ ಖುಲ್ಲಾ ಜಾಗದಲ್ಲಿ ಜೂಜಾಟ ಆಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ದಾಳಿ ಮಾಡಿದ ಪಿಐ ವೀರಣ್ಣ ದೊಡ್ಡಮನಿ ನೇತೃತ್ವದ ತಂಡ ಜೂಜುಕೋರರನ್ನು ಬಂಧಿಸಿ, ಹಣ ಜಪ್ತಿ ಮಾಡಿದೆ.</p><p>ರವಿಕುಮಾರ ಕೊಟಕುಂಡಾ, ಪಿತಾಂಬರ ಕಾಟಿಗ, ರಾಜೇಶ, ಶರಣಪ್ಪ, ತುಳಸಿರಾಂ ರಾಠೋಡ್, ಶಿವಕುಮಾರ, ಭಾಸ್ಕರ್, ರಾಮು ರಾಠೋಡ್, ಪ್ರಕಾಶ ನಿರೇಟಿ ಮತ್ತು ಬಾಲಪ್ಪ ನಿರೇಟಿ ಎಂಬುವವರೇ ಜೂಜಾಟದಲ್ಲಿ ತೊಡಗಿದ್ದರು. ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಇತ್ತೀಚಿಗೆ ಗುರುಮಠಕಲ್ ಪಟ್ಟಣ ಸೇರಿದಂತೆಯೇ ತಾಲ್ಲೂಕಿನ ಬಹುತೇಕ ಹಳ್ಳಿಗಳಲ್ಲಿ ಜೂಜಾಟ ಮತ್ತು ಮಟಕಾ ಹಾವಳಿ ಜಾಸ್ತಿಯಾಗಿದ್ದರ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಈ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಶೇಷ ತಂಡ ರಚಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>