ಯಾದಗಿರಿ:ಗಣೇಶ ಚತುರ್ಥಿ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.ಈ ಬಾರಿ ಕೊರೊನಾ ಕಾರಣದಿಂದ ಹೆಚ್ಚಿನ ಸಂಖ್ಯೆಯ ಗಣೇಶ ಮಂಡಳಿಗಳು ವಿಗ್ರಹ ಪ್ರತಿಷ್ಠಾಪನೆ ಮಾಡಿಲ್ಲ.
ನಗರದ ವಿವಿಧ ಕಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಕೆಲ ಕಡೆ ಚಿಕ್ಕ ಗಾತ್ರದ ಮೂರ್ತಿಗಳನ್ನು ಒಂದೇ ದಿನ ಪ್ರತಿಷ್ಠಾಪಿಸಿ ನಂತರ ವಿಸರ್ಜಿಸಲಾಯಿತು.ಸರ್ಕಾರದ ಸೂಚನೆಯ ಮೇರೆಗೆ ಮೆರವಣಿಗೆ ನಡೆಯಲಿಲ್ಲ.ಬೆಳಿಗ್ಗೆ ಮತ್ತು ಸಂಜೆ ಪೂಜೆ ಮಾಡಿಮಹಾಮಂಗಳಾರತಿ ನಂತರ ಪ್ರಸಾದ ವಿತರಿಸಲಾಯಿತು.
ಸರ್ಕಾರ ಹಲವಾರು ನಿರ್ಬಂಧ ವಿಧಿಸಿದ್ದರಿಂದ ಹೆಚ್ಚಿನ ಗಣೇಶ ಮಂಡಳಿಗಳುಅರ್ಜಿ ಸಲ್ಲಿಸಿಲ್ಲ ಎಂದು ನಗರಸಭೆ ಮೂಲಗಳು ತಿಳಿಸಿವೆ.