ನಗರದ ಗಾಂಧಿ ಚೌಕ್, ಸ್ಟೇಷನ್ ಏರಿಯಾ, ಚಿತ್ತಾಪುರ ರಸ್ತೆ, ಹೊಸ ಬಸ್ ನಿಲ್ದಾಣ, ಚಕ್ರಕಟ್ಟಾ, ಕನಕದಾಸ ವೃತ್ತ, ಹೊಸಳ್ಳಿ ಕ್ರಾಸ್, ಗಂಜ್ ಪ್ರದೇಶ ಸೇರಿದಂತೆ ವಿವಿಧೆಡೆ ಸಂಜೆ ಸಾಮೂಹಿಕ ಪೂಜೆ ನೆರವೇರಿಸಿ ಗಣೇಶ ಮೂರ್ತಿಗಳನ್ನು ಸ್ಥಾಪಿಸಲಾಯಿತು. ನೈವೇದ್ಯಕ್ಕೆ ಕಡಬು, ಲಾಡು, ಕರ್ಚಿಕಾಯಿ, ಹೋಳಿಗೆ ತಯಾರಿಸಿ ಅರ್ಪಿಸಲಾಯಿತು.