ಜಿಲ್ಲೆಯಲ್ಲಿ ಶಾಲಾ ಶಿಕ್ಷಕರ ಕೊರತೆ ಕೊಠಡಿ ದುರಸ್ತಿಗೆ ಸಂಬಂಧಿಸಿದಂತೆ ಕೆಕೆಆರ್ಡಿಬಿಗೆ ಪತ್ರ ಬರೆಯಲಾಗಿದ್ದು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆಜೆ.ಎಚ್.ಮಂಜುನಾಥ ಉಪನಿರ್ದೇಶಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ತಾಲ್ಲೂಕಿನ ಶಿಕ್ಷಣದ ಗುಣಮಟ್ಟ ಮೂಲಸೌಕರ್ಯಗಳು ಸುಧಾರಣೆಯ ಬಗ್ಗೆ ಶಿಕ್ಷಣ ತಜ್ಞರಿಂದ ಸಮಗ್ರ ತನಿಖೆಯಾಗಬೇಕು. ಅಧಿಕಾರಿಗಳು ಮೊದಲ ಆದ್ಯತೆಯಾಗಿ ಈ ಕಾರ್ಯ ತೆಗೆದುಕೊಳ್ಳಬೇಕುಅಹ್ಮದ್ ಪಠಾಣ ಪಾಲಕ ಸುರಪುರ
ಫಲಿತಾಂಶ ಸುಧಾರಣೆಗೆ ಮಾರ್ಗಸೂಚಿಯ ಪ್ರಕಾರ ಎಲ್ಲ ಚಟುವಟಿಕೆಗಳನ್ನು ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಪಾಲಕರ ಸಹಕಾರವೂ ಮುಖ್ಯವಾಗಿರುತ್ತದೆ. ಎಲ್ಲರೂ ಸೇರಿ ಸುಧಾರಣೆಗೆ ಯತ್ನಿಸೋಣಪಂಡಿತ ನಿಂಬೂರ ಕ್ಷೇತ್ರ ಸಮನ್ವಯಾಧಿಕಾರಿ ಸುರಪುರ
ಎಸ್ಡಿಎಂಸಿ ರಚನೆಯಲ್ಲಿ ರಾಜಕಾರಣ ಮಾಡಬಾರದು. ಸುಧಾರಣೆ ದೃಷ್ಟಿಕೋನ ಇರುವ ಪಾಲಕರಿಗೆ ಅವಕಾಶ ಮಾಡಿಕೊಡಬೇಕು. ಮುಖ್ಯ ಶಿಕ್ಷಕ ಪಾಲಕರು ಮತ್ತು ಸಮುದಾಯದ ಸಹಕಾರ ಮುಖ್ಯಮಹಾದೇವಪ್ಪ ಗಡ್ಡದರ ಎಸ್ಡಿಎಂಸಿ ಅಧ್ಯಕ್ಷ ದೇವಿಕೇರಿ
ಯಾದಗಿರಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದ ಶಿಕ್ಷಕರ ಸಂಖ್ಯೆ ಕೊರತೆಯಲ್ಲಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳಿಂದ ಶೈಕ್ಷಣಿಕ ಮಟ್ಟ ಸುಧಾರಿಸಲು ಸಾಕಷ್ಟು ಪ್ರಯತ್ನಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಶಿಕ್ಷಕರನ್ನು ನಿಯೋಜಿಸುವ ಮೂಲಕ ಹುಣಸಗಿ ತಾಲ್ಲೂಕು ಸೇರಿದಂತೆ ಯಾದಗಿರಿ ಜಿಲ್ಲೆ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಮುಂದಾಗಲಿಮಹಾದೇವಿ ಬೇನಾಳಮಠ ರೈತ ಸಂಘದ ಪ್ರಮುಖರು
ತಾಲ್ಲೂಕಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಕೊರತೆ ಇರುವುದರಿಂದಾಗಿ ಮಕ್ಕಳಿಂದ ಗುಣಮಟ್ಟದ ಶಿಕ್ಷಣ ನಿರೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನುರಿತ ಶಿಕ್ಷಕರನ್ನು ವಿಷಯವಾರು ತುಂಬಿಕೊಳ್ಳುವ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರಯತ್ನಿಸಲಿಬಸವರಾಜ ಹಗರಟಗಿ ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.