<p><strong>ಹುಣಸಗಿ: </strong>‘ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಉದಾಸೀನ ಮಾಡದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು’ ಎಂದು ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಧರ್ಮರಾಜ ಹೊಸಮನಿ ಸಲಹೆ ನೀಡಿದರು.</p>.<p>ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯು ಇಲ್ಲಿನ ಮಾತೋಶ್ರೀ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>‘ತಾಲ್ಲೂಕಿನ ಬಹುತೇಕ ಜನರು ನರರೋಗ, ಹೃದಯ ಸಂಬಂಧಿ ಹಾಗೂ ಮೂತ್ರಪಿಂಡ ಕಾಯಿಲೆ ಇದ್ದರೂ ಅಲಕ್ಷ್ಯ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಕನಿಷ್ಠ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಹೃದಯ ರೋಗ ತಜ್ಞ ಡಾ. ಹನುಮಂತ ಮಾತನಾಡಿ,‘ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬಾರದಂತೆ ಮುಂಜಾಗ್ರತೆ ವಹಿಸುವುದು ಸೂಕ್ತ’ ಎಂದು ಹೇಳಿದರು.</p>.<p>ಶಿಬಿರದ ಆಯೋಜಕ ಹುಣಸಗಿ ಜಿ.ಪಂ.ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಮಾತನಾಡಿ,‘ತಾಲ್ಲೂಕಿನ ಜನರ ಆರೋಗ್ಯದ ಕಾಳಜಿಯಿಂದಾಗಿ ಕಳೆದ ಮೂರು ವರ್ಷಗಳಿಂದ ಶಿಬಿರ ಆಯೋಜಿಸುತ್ತ ಬರಲಾಗಿದೆ. ಶಸ್ತ್ರ ಚಿಕಿತ್ಸೆ ಅಗತ್ಯ ಇರುವ ರೋಗಿಗಳಿಗೆ ಬೆಂಗಳೂರಿಗೆ ಹೋಗಿ ಬರಲು ಬಸ್ ವೆಚ್ಚವನ್ನು ಭರಿಸಲಾಗುವುದು’ ಎಂದರು.<br /><br />ವೈದ್ಯ ಡಾ. ಯೂಸೂಫ್ ಡೆಕ್ಕನ್, ಮುಖಂಡರಾದ ಮೇಲಪ್ಪ ಗುಳಗಿ, ಎಎಸ್ಐ ಮೌನೇಶ ಬಡಿಗೇರ, ಈರಪ್ಪ ದೇಸಾಯಿ, ಎಂ.ಎಸ್. ಚಂದಾ, ಎಸ್.ಎಂ.ವಿರಕ್ತಮಠ, ಬಸಣ್ಣ ಬಾಲಗೌಡರ್, ಹಳ್ಳೆಪ್ಪ ಗುತ್ತೇದಾರ್ ಹಾಗೂ ಅಮರಪ್ಪ ಬಂಡೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ: </strong>‘ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಉದಾಸೀನ ಮಾಡದೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು’ ಎಂದು ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಧರ್ಮರಾಜ ಹೊಸಮನಿ ಸಲಹೆ ನೀಡಿದರು.</p>.<p>ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯು ಇಲ್ಲಿನ ಮಾತೋಶ್ರೀ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>‘ತಾಲ್ಲೂಕಿನ ಬಹುತೇಕ ಜನರು ನರರೋಗ, ಹೃದಯ ಸಂಬಂಧಿ ಹಾಗೂ ಮೂತ್ರಪಿಂಡ ಕಾಯಿಲೆ ಇದ್ದರೂ ಅಲಕ್ಷ್ಯ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಕನಿಷ್ಠ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಹೃದಯ ರೋಗ ತಜ್ಞ ಡಾ. ಹನುಮಂತ ಮಾತನಾಡಿ,‘ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬಾರದಂತೆ ಮುಂಜಾಗ್ರತೆ ವಹಿಸುವುದು ಸೂಕ್ತ’ ಎಂದು ಹೇಳಿದರು.</p>.<p>ಶಿಬಿರದ ಆಯೋಜಕ ಹುಣಸಗಿ ಜಿ.ಪಂ.ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಮಾತನಾಡಿ,‘ತಾಲ್ಲೂಕಿನ ಜನರ ಆರೋಗ್ಯದ ಕಾಳಜಿಯಿಂದಾಗಿ ಕಳೆದ ಮೂರು ವರ್ಷಗಳಿಂದ ಶಿಬಿರ ಆಯೋಜಿಸುತ್ತ ಬರಲಾಗಿದೆ. ಶಸ್ತ್ರ ಚಿಕಿತ್ಸೆ ಅಗತ್ಯ ಇರುವ ರೋಗಿಗಳಿಗೆ ಬೆಂಗಳೂರಿಗೆ ಹೋಗಿ ಬರಲು ಬಸ್ ವೆಚ್ಚವನ್ನು ಭರಿಸಲಾಗುವುದು’ ಎಂದರು.<br /><br />ವೈದ್ಯ ಡಾ. ಯೂಸೂಫ್ ಡೆಕ್ಕನ್, ಮುಖಂಡರಾದ ಮೇಲಪ್ಪ ಗುಳಗಿ, ಎಎಸ್ಐ ಮೌನೇಶ ಬಡಿಗೇರ, ಈರಪ್ಪ ದೇಸಾಯಿ, ಎಂ.ಎಸ್. ಚಂದಾ, ಎಸ್.ಎಂ.ವಿರಕ್ತಮಠ, ಬಸಣ್ಣ ಬಾಲಗೌಡರ್, ಹಳ್ಳೆಪ್ಪ ಗುತ್ತೇದಾರ್ ಹಾಗೂ ಅಮರಪ್ಪ ಬಂಡೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>