<p><strong>ಯಾದಗಿರಿ</strong>: ‘ದೇಶದ ಬೆನ್ನೆಲುಬಾಗಿರುವ ರೈತರನ್ನು ಎಲ್ಲ ಅಧಿಕಾರಿಗಳು ಗೌರವಿಸಬೇಕು. ಯೋಜನೆಗಳ ಕುರಿತು ಅವರಿಗೆ ಸಂಪೂರ್ಣ ಮಾಹಿತಿ ತಲುಪಿಸಿ ತಿಳಿವಳಿಕೆ ನೀಡಬೇಕು. ಅಂದಾಗ ಮಾತ್ರ ಅವರಿಗೆ ಸಹಕಾರ ದೊರೆಯುತ್ತದೆ’ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.</p>.<p>ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ರೈತರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರೈತರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆದು ಮುಂದೆ ಬರಬೇಕು.ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರೈತರ ಪರ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಯಾವ ರೈತರು ಆತಂಕ ಪಡಬಾರದು. ರೈತರ ಏಳಿಗೆಗೆ ನಮ್ಮ ಸರ್ಕಾರ ಸದಾ ಸ್ಪಂದಿಸುತ್ತದೆ. ರೈತರ ಪರವಾಗಿ ನಿಲ್ಲುತ್ತದೆ’ ಎಂದರು.</p>.<p>‘ಅಧಿಕಾರಿಗಳು ಯಾವುದೇ ಕಾರಣಕ್ಕೂ ಅರ್ಹ ರೈತರು ಸರ್ಕಾರದ ಸೌಕರ್ಯಗಳಿಂದ ವಂಚಿತವಾಗದಂತೆ ಕಾಳಜಿವಹಿಸಬೇಕು’ ಎಂದರು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶರಣಗೌಡ ಕಾಳಬೆಳಗುಂದಿ ಮಾತನಾಡಿ, ‘ಸರ್ಕಾರದಿಂದ ರೈತರಿಗೆ ಸಿಗುವ ಎಲ್ಲ ಅನುಕೂಲಗಳನ್ನು ರೈತರಿಗೆ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಭೀಮರೆಡ್ಡಿ ಕೂಡ್ಲೂರ, ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ದೇಶದ ಬೆನ್ನೆಲುಬಾಗಿರುವ ರೈತರನ್ನು ಎಲ್ಲ ಅಧಿಕಾರಿಗಳು ಗೌರವಿಸಬೇಕು. ಯೋಜನೆಗಳ ಕುರಿತು ಅವರಿಗೆ ಸಂಪೂರ್ಣ ಮಾಹಿತಿ ತಲುಪಿಸಿ ತಿಳಿವಳಿಕೆ ನೀಡಬೇಕು. ಅಂದಾಗ ಮಾತ್ರ ಅವರಿಗೆ ಸಹಕಾರ ದೊರೆಯುತ್ತದೆ’ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.</p>.<p>ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ರೈತರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರೈತರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆದು ಮುಂದೆ ಬರಬೇಕು.ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರೈತರ ಪರ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ಯಾವ ರೈತರು ಆತಂಕ ಪಡಬಾರದು. ರೈತರ ಏಳಿಗೆಗೆ ನಮ್ಮ ಸರ್ಕಾರ ಸದಾ ಸ್ಪಂದಿಸುತ್ತದೆ. ರೈತರ ಪರವಾಗಿ ನಿಲ್ಲುತ್ತದೆ’ ಎಂದರು.</p>.<p>‘ಅಧಿಕಾರಿಗಳು ಯಾವುದೇ ಕಾರಣಕ್ಕೂ ಅರ್ಹ ರೈತರು ಸರ್ಕಾರದ ಸೌಕರ್ಯಗಳಿಂದ ವಂಚಿತವಾಗದಂತೆ ಕಾಳಜಿವಹಿಸಬೇಕು’ ಎಂದರು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶರಣಗೌಡ ಕಾಳಬೆಳಗುಂದಿ ಮಾತನಾಡಿ, ‘ಸರ್ಕಾರದಿಂದ ರೈತರಿಗೆ ಸಿಗುವ ಎಲ್ಲ ಅನುಕೂಲಗಳನ್ನು ರೈತರಿಗೆ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಭೀಮರೆಡ್ಡಿ ಕೂಡ್ಲೂರ, ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>