ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ ಮಾರ್ಗ ಅನುಸರಿಸಲು ಜಾಲಹಳ್ಳಿ ಜಯಶಾಂತಲಿಂಗೇಶ್ವರ ಸ್ವಾಮೀಜಿ ಸಲಹೆ

Last Updated 19 ಡಿಸೆಂಬರ್ 2019, 10:29 IST
ಅಕ್ಷರ ಗಾತ್ರ

ಹುಣಸಗಿ: ಪ್ರತಿಯೊಬ್ಬರೂ ಧರ್ಮ ಮಾರ್ಗವನ್ನು ಅನುಸರಿಸಿ ನಡೆದರೇ ಧರ್ಮ ಅವರನ್ನು ಕಾಪಾಡುತ್ತದೆ ಎಂದು ಜಾಲಹಳ್ಳಿಯ ಜಯಶಾಂತಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಹೊರಲವಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಅಯ್ಯಾಚಾರ ಮತ್ತು ತುಲಾಭಾರ ಮತ್ತು ಧರ್ಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರೂ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಿಂದ ದೂರ ಉಳಿಯುತ್ತಿದ್ದಾರೆ ಎಂದರು.ನೆಮ್ಮದಿಯ ಜೀವನಕ್ಕಾಗಿ ಭಗವಂತ, ಗುರು ಸ್ಮರಣೆ ಅಗತ್ಯ ಎಂದರು.

ದೇವಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಈ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಡೆದಾಡುವ ದೇವರು, ತಿವಿಧ ದಾಸೋಹಿಗಳು ಎಂದು ಹೆಸರಾದ ಜಾಲಹಳ್ಳಿಯ ಜಯ ಶಾಂತಲಿಂಗೇಶ್ವರ ಸ್ವಾಮಿಗಳು ಸಾಮಾಜಿಕ ಕಳಕಳಿ ಹೊಂದಿದ್ದು, ಮಕ್ಕಳಿಗೆ ಶಿಕ್ಷಣ, ವಸತಿ, ಧಾರ್ಮಿಕ ಪ್ರಜ್ಞೆ ನೀಡುವ ಮೂಲಕ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಾಹಿತ್ಯ, ಸಂಗೀತ, ಕೃಷಿ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸತ್ಕರಿಸಲಾಯಿತು.

ಡಾ.ವಿಶ್ವರಾಧ್ಯ ಸ್ವಾಮೀಜಿ ಮಾಗಣಗೇರಿ, ವೀರಘಟ್ಟದ ಅಡವಿಲಿಂಗ ಮಹಾರಾಜರು, ಕೆಂಭಾವಿ ಚನ್ನವೀರ ಶಿವಾಚಾರ್ಯರು, ಸೂಗೂರು, ರುಕ್ಮಾಪುರ, ಮಲ್ಲಿಕಾರ್ಜುನ ಸ್ವಾಮಿ ಸ್ಥಾವರಮಠ, ಯುವ ಮುಖಂಡ ಹನುಮಂತ ನಾಯಕ, ಡಾ.ಬಸನಗೌಡ ಅಳ್ಳಿಕೋಟಿ, ಎಚ್.ಸಿ.ಪಾಟೀಲ, ಸಂಗನ ಗೌಡ ಪಾಟೀಲ ವಜ್ಜಲ, ಸುರೇಶ ಸಜ್ಜನ, ಬಸವರಾಜ ಮಲಗಲದಿನ್ನಿ, ಸಿದ್ದಣ್ಣ ಅಂಕಲಕೋಟಿ, ಹೊನ್ನಪ್ಪ ದೇಸಾಯಿ, ಬಿ.ಎಲ್. ಹಿರೇಮಠ, ತಿಪ್ಪಣ್ಣ ಚಂದಾ, ಅಮರಯ್ಯಸ್ವಾಮಿ ಜಾಲಿಬೆಂಚಿ, ಡಾ.ಎಸ್.ಬಿ.ಪಾಟೀಲ ಇದ್ದರು.

ಮಂಗಳವಾರ ಸಂಜೆ ಜಯಶಾಂತಲಿಂಗೇಶ್ವರ ಸ್ವಾಮೀಜಿಗಳನ್ನು ಅಲಂಕೃತ ಸಾರೋಟದಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಗೆ ಸಂಸದ ರಾಜಾ ಅಮರೇಶ ನಾಯಕ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT