<p><strong>ಯಾದಗಿರಿ</strong>: ‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಉತ್ತಮವಾದ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ’ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ ಹೇಳಿದರು.</p>.<p>ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕ ಮತ್ತು ಯುನಿಸೇಫ್ ಸಹಯೋಗದಲ್ಲಿ ಏರ್ಪಡಿಸಿದ್ದ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ಭಾಗದಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೆಲ ವರ್ಷಗಳಿಂದ ಬಹಳಷ್ಟು ಮಕ್ಕಳು ಸಾವಿಗೀಡಾದ ಪ್ರಕರಣಗಳು ಜರುಗಿವೆ. ಇದನ್ನು ತಡೆಗಟ್ಟಲು ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಅಪೌಷ್ಟಿಕತೆಯನ್ನು ನಿವಾರಿಸಿ ಮಕ್ಕಳಲ್ಲಿ ಉತ್ತಮ ಆರೋಗ್ಯ ಉಂಟಾಗುವಂತೆ ಮಾಡಲಾಗುತ್ತಿದೆ’ ಎಂದರು.</p>.<p>‘ಇಂದಿನ ಮಕ್ಕಳು ನಾಳಿನ ನಾಗರಿಕರು ಎನ್ನುವಂತೆ ದೇಶದ ಭವಿಷ್ಯ ರೂಪಿಸುವ ಮಕ್ಕಳು ಸದೃಢವಾದ ಆರೋಗ್ಯ ಹೊಂದಿದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದರು.</p>.<p>ಪ್ರಾಧ್ಯಾಪಕ ಡಾ.ಸರ್ವೋದಯ ಶಿವಪುತ್ರ ಮಾತನಾಡಿ, ‘ಎನ್ಎಸ್ಎಸ್ ಸ್ವಯಂ ಸೇವಕರು ತಮ್ಮ ಅಧ್ಯಯನದ ಜೊತೆಗೆ ಸಾಮಾಜಿಕ ಕಳಕಳಿಯ ಕೆಲಸ, ಕಾರ್ಯಗಳನ್ನು ಮಾಡುವಲ್ಲಿ ತೊಡಗಿಸಿಕೊಂಡರೆ ಅದು ದೇಶ ಸೇವೆ ಮಾಡಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಕ್ರೀಯಾಶೀಲವಾಗಿ ತೊಡಗಿಸಿಕೊಂಡು ಸೇವಾ ಯೋಜನೆಯ ಉದ್ದೇಶಗಳನ್ನು ಈಡೇರಿಸಬೇಕು’ ಎಂದರು.</p>.<p>ಡಾ.ಅಶೋಕರೆಡ್ಡಿ ಪಾಟೀಲ, ಶರಣಬಸ್ಸಪ್ಪ ರಾಯಕೋಟಿ, ಡಾ.ಜೆಟ್ಟಪ್ಪ ಡಿ., ಬಿ.ಆರ್.ಕೇತನಕರ್, ಡಾ.ಬಿ.ಎಸ್.ಸಿಂಗೆ ಇದ್ದರು. ಡಾ.ಚಂದ್ರಶೇಖರ ಕೊಂಕಲ್ ಸ್ವಾಗತಿಸಿದರು. ರಾಘವೇಂದ್ರ ಬಂಡಿಮನಿ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಉತ್ತಮವಾದ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ’ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ ಹೇಳಿದರು.</p>.<p>ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕ ಮತ್ತು ಯುನಿಸೇಫ್ ಸಹಯೋಗದಲ್ಲಿ ಏರ್ಪಡಿಸಿದ್ದ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ಭಾಗದಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೆಲ ವರ್ಷಗಳಿಂದ ಬಹಳಷ್ಟು ಮಕ್ಕಳು ಸಾವಿಗೀಡಾದ ಪ್ರಕರಣಗಳು ಜರುಗಿವೆ. ಇದನ್ನು ತಡೆಗಟ್ಟಲು ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಅಪೌಷ್ಟಿಕತೆಯನ್ನು ನಿವಾರಿಸಿ ಮಕ್ಕಳಲ್ಲಿ ಉತ್ತಮ ಆರೋಗ್ಯ ಉಂಟಾಗುವಂತೆ ಮಾಡಲಾಗುತ್ತಿದೆ’ ಎಂದರು.</p>.<p>‘ಇಂದಿನ ಮಕ್ಕಳು ನಾಳಿನ ನಾಗರಿಕರು ಎನ್ನುವಂತೆ ದೇಶದ ಭವಿಷ್ಯ ರೂಪಿಸುವ ಮಕ್ಕಳು ಸದೃಢವಾದ ಆರೋಗ್ಯ ಹೊಂದಿದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದರು.</p>.<p>ಪ್ರಾಧ್ಯಾಪಕ ಡಾ.ಸರ್ವೋದಯ ಶಿವಪುತ್ರ ಮಾತನಾಡಿ, ‘ಎನ್ಎಸ್ಎಸ್ ಸ್ವಯಂ ಸೇವಕರು ತಮ್ಮ ಅಧ್ಯಯನದ ಜೊತೆಗೆ ಸಾಮಾಜಿಕ ಕಳಕಳಿಯ ಕೆಲಸ, ಕಾರ್ಯಗಳನ್ನು ಮಾಡುವಲ್ಲಿ ತೊಡಗಿಸಿಕೊಂಡರೆ ಅದು ದೇಶ ಸೇವೆ ಮಾಡಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಕ್ರೀಯಾಶೀಲವಾಗಿ ತೊಡಗಿಸಿಕೊಂಡು ಸೇವಾ ಯೋಜನೆಯ ಉದ್ದೇಶಗಳನ್ನು ಈಡೇರಿಸಬೇಕು’ ಎಂದರು.</p>.<p>ಡಾ.ಅಶೋಕರೆಡ್ಡಿ ಪಾಟೀಲ, ಶರಣಬಸ್ಸಪ್ಪ ರಾಯಕೋಟಿ, ಡಾ.ಜೆಟ್ಟಪ್ಪ ಡಿ., ಬಿ.ಆರ್.ಕೇತನಕರ್, ಡಾ.ಬಿ.ಎಸ್.ಸಿಂಗೆ ಇದ್ದರು. ಡಾ.ಚಂದ್ರಶೇಖರ ಕೊಂಕಲ್ ಸ್ವಾಗತಿಸಿದರು. ರಾಘವೇಂದ್ರ ಬಂಡಿಮನಿ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>