<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ವರ್ಷಧಾರೆಯಾಗಿದೆ.</p>.<p>ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲೇ ಉತ್ತಮ ಮಳೆಯಾಗಿದ್ದರಿಂದ ರೈತರಿಗೆ ಮುಖದಲ್ಲಿ ಸಂತಸ ಉಂಟು ಮಾಡಿದೆ. ಸೋಮವಾರ ಬೆಳಿಗ್ಗೆಯಿಂದ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಯಿತು. ವ್ಯಾಪಾರಿಗಳು, ಪಾದಚಾರಿಗಳು ಮಳೆಯಲ್ಲಿ ಪರದಾಡಿದರು.</p>.<p>ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಮಳೆಗೆ 4 ಮನೆಗಳಿಗೆ ಹಾನಿಯಾಗಿದೆ. ದೋರನಹಳ್ಳಿಯಲ್ಲಿ ಮನೆ ಗೋಡೆ ಕುಸಿದಿದೆ.</p>.<h2><strong>ರಸ್ತೆ ಮೇಲೆ ಹರಿದ ನೀರು:</strong></h2>.<p>ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ರಸ್ತೆ ಮೇಲೆ ಹರಿದಾಡಿತು. ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತ ಸಮೀಪದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಮೇಲೆ ನೀರು ನಿಂತುಕೊಳ್ಳುತ್ತಿದೆ. ಸಿಸಿ ರಸ್ತೆಯ ಕಾಮಗಾರಿ ಎತ್ತರಿಸಿದ್ದು, ಇದರಿಂದ ನೀರು ಹರಿಯದೇ ರಸ್ತೆಯಲ್ಲಿಯೇ ನಿಲ್ಲುತ್ತಿದೆ.</p>.<h2><strong>ಜಿಲ್ಲೆಯ ವಿವಿಧೆಡೆ ಮಳೆ:</strong></h2>.<p>ಸುರಪುರದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆಯವರೆಗೆ ಉತ್ತಮ ಮಳೆಯಾಗಿದೆ.</p>.<p>ಶಹಾಪುರ, ಹುಣಸಗಿಯಲ್ಲಿ ಜಿಟಿಜಿಟಿ ಮಳೆಯಾಗಿದೆ.</p>.<p>ಸೋಮವಾರ ಬೆಳಿಗ್ಗೆಯಿಂದ ಸಂಜೆ 7 ಗಂಟೆ ವರೆಗಿನ ಹವಮಾನ ಇಲಾಖೆಯ ಮಾಹಿತಿಯಂತೆ ಯಾದಗಿರಿಯಲ್ಲಿ 6 ಮಿಲಿಮೀಟರ್ (ಎಂಎಂ), ಹತ್ತಿಕುಣಿ 4 ಎಂಎಂ, ಶಹಾಪುರ ನಗರದಲ್ಲಿ 22 ಎಂಎಂ, ದೋರನಹಳ್ಳಿಯಲ್ಲಿ 11 ಎಂಎಂಮ ಹುಣಸಗಿಯಲ್ಲಿ 17 ಎಂಎಂ ಮಳೆಯಾಗಿದೆ.</p>.<h2><strong>ಎರಡು ನದಿಗಳಿಗೆ ಹೆಚ್ಚಿದ ಒಳಹರಿವು:</strong></h2>.<p>ಕೃಷ್ಣಾ ಮತ್ತು ಭೀಮಾ ನದಿಗೆ ಒಳಹರಿವು ಹೆಚ್ಚಳವಾಗಿದ್ದು, ಹೊರಹರಿವು ಹೆಚ್ಚಳವಾಗಿದೆ.</p>.<p>ಯಾದಗಿರಿ– ಗುರುಸಣಗಿ ಬ್ರಿಜ್ ಕಂ ಬ್ಯಾರೇಜ್ನಿಂದ ಭೀಮಾ ನದಿಗೆ 12,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಅಲ್ಲದೇ ಒಳಹರಿವು 15,000 ಕ್ಯುಸೆಕ್ ಇದೆ.</p>.<p>ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 17,433 ಕ್ಯುಸೆಕ್ ನೀರು ಒಳಹರಿವಿದ್ದರೆ, 7,865 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<h2><strong>ಬೆಳೆಗಳಿಗೆ ಆಸರೆ:</strong></h2>.<p>ಕಳೆದ ಎರಡು ದಿನಗಳಿಂದ ಸುರಿದ ಮಳೆ ವಿವಿಧ ಬೆಳೆಗಳಿಗೆ ಆಸರೆಯಾಗಿದೆ. ಹತ್ತಿ, ತೊಗರಿ, ಮೆಣಸಿನಕಾಯಿ ಬೆಳೆಗಳು ಮಳೆಯಿಲ್ಲದೇ ಒಣಗಲು ಆರಂಭಿಸಿದ್ದವು. ಆದರೆ, ಜಿಟಿಜಿಟಿ ಮಳೆಯಿಂದ ಸ್ವಲ್ಪಮಟ್ಟಿಗೆ ಅನುಕೂಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಉತ್ತಮ ವರ್ಷಧಾರೆಯಾಗಿದೆ.</p>.<p>ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲೇ ಉತ್ತಮ ಮಳೆಯಾಗಿದ್ದರಿಂದ ರೈತರಿಗೆ ಮುಖದಲ್ಲಿ ಸಂತಸ ಉಂಟು ಮಾಡಿದೆ. ಸೋಮವಾರ ಬೆಳಿಗ್ಗೆಯಿಂದ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಯಿತು. ವ್ಯಾಪಾರಿಗಳು, ಪಾದಚಾರಿಗಳು ಮಳೆಯಲ್ಲಿ ಪರದಾಡಿದರು.</p>.<p>ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಮಳೆಗೆ 4 ಮನೆಗಳಿಗೆ ಹಾನಿಯಾಗಿದೆ. ದೋರನಹಳ್ಳಿಯಲ್ಲಿ ಮನೆ ಗೋಡೆ ಕುಸಿದಿದೆ.</p>.<h2><strong>ರಸ್ತೆ ಮೇಲೆ ಹರಿದ ನೀರು:</strong></h2>.<p>ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ರಸ್ತೆ ಮೇಲೆ ಹರಿದಾಡಿತು. ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತ ಸಮೀಪದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಮೇಲೆ ನೀರು ನಿಂತುಕೊಳ್ಳುತ್ತಿದೆ. ಸಿಸಿ ರಸ್ತೆಯ ಕಾಮಗಾರಿ ಎತ್ತರಿಸಿದ್ದು, ಇದರಿಂದ ನೀರು ಹರಿಯದೇ ರಸ್ತೆಯಲ್ಲಿಯೇ ನಿಲ್ಲುತ್ತಿದೆ.</p>.<h2><strong>ಜಿಲ್ಲೆಯ ವಿವಿಧೆಡೆ ಮಳೆ:</strong></h2>.<p>ಸುರಪುರದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆಯವರೆಗೆ ಉತ್ತಮ ಮಳೆಯಾಗಿದೆ.</p>.<p>ಶಹಾಪುರ, ಹುಣಸಗಿಯಲ್ಲಿ ಜಿಟಿಜಿಟಿ ಮಳೆಯಾಗಿದೆ.</p>.<p>ಸೋಮವಾರ ಬೆಳಿಗ್ಗೆಯಿಂದ ಸಂಜೆ 7 ಗಂಟೆ ವರೆಗಿನ ಹವಮಾನ ಇಲಾಖೆಯ ಮಾಹಿತಿಯಂತೆ ಯಾದಗಿರಿಯಲ್ಲಿ 6 ಮಿಲಿಮೀಟರ್ (ಎಂಎಂ), ಹತ್ತಿಕುಣಿ 4 ಎಂಎಂ, ಶಹಾಪುರ ನಗರದಲ್ಲಿ 22 ಎಂಎಂ, ದೋರನಹಳ್ಳಿಯಲ್ಲಿ 11 ಎಂಎಂಮ ಹುಣಸಗಿಯಲ್ಲಿ 17 ಎಂಎಂ ಮಳೆಯಾಗಿದೆ.</p>.<h2><strong>ಎರಡು ನದಿಗಳಿಗೆ ಹೆಚ್ಚಿದ ಒಳಹರಿವು:</strong></h2>.<p>ಕೃಷ್ಣಾ ಮತ್ತು ಭೀಮಾ ನದಿಗೆ ಒಳಹರಿವು ಹೆಚ್ಚಳವಾಗಿದ್ದು, ಹೊರಹರಿವು ಹೆಚ್ಚಳವಾಗಿದೆ.</p>.<p>ಯಾದಗಿರಿ– ಗುರುಸಣಗಿ ಬ್ರಿಜ್ ಕಂ ಬ್ಯಾರೇಜ್ನಿಂದ ಭೀಮಾ ನದಿಗೆ 12,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಅಲ್ಲದೇ ಒಳಹರಿವು 15,000 ಕ್ಯುಸೆಕ್ ಇದೆ.</p>.<p>ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 17,433 ಕ್ಯುಸೆಕ್ ನೀರು ಒಳಹರಿವಿದ್ದರೆ, 7,865 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.</p>.<h2><strong>ಬೆಳೆಗಳಿಗೆ ಆಸರೆ:</strong></h2>.<p>ಕಳೆದ ಎರಡು ದಿನಗಳಿಂದ ಸುರಿದ ಮಳೆ ವಿವಿಧ ಬೆಳೆಗಳಿಗೆ ಆಸರೆಯಾಗಿದೆ. ಹತ್ತಿ, ತೊಗರಿ, ಮೆಣಸಿನಕಾಯಿ ಬೆಳೆಗಳು ಮಳೆಯಿಲ್ಲದೇ ಒಣಗಲು ಆರಂಭಿಸಿದ್ದವು. ಆದರೆ, ಜಿಟಿಜಿಟಿ ಮಳೆಯಿಂದ ಸ್ವಲ್ಪಮಟ್ಟಿಗೆ ಅನುಕೂಲವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>