‘ನಗರ–ಪಟ್ಟಣದ ಅಭಿವೃದ್ಧಿಗೆ ಸಂಬಂಧಿಸಿದ ನಿರ್ಣಯಗಳನ್ನು ಪೌರಾಯುಕ್ತರು ಮತ್ತು ಜಿಲ್ಲಾಧಿಕಾರಿಯವರೇ ಕೈಗೊಳ್ಳುತ್ತಾರೆ. ನಮ್ಮ ಸಲಹೆ, ಸೂಚನೆಗಳನ್ನು ಪರಿಗಣಿಸುವುದಿಲ್ಲ. ವಾರ್ಡ್ನ ಕಾರ್ಯಗಳಿಗೆ ದೂರವಣಿ ಕರೆ ಮಾಡಿದರೆ, ಅಧಿಕಾರಿಗಳು ಸ್ವೀಕರಿಸುವುದಿಲ್ಲ. ವಾರ್ಡ್ನ ಜನರು ನಮ್ಮ ಎದುರು ಅಹವಾಲು ತೋಡಿಕೊಳ್ಳುತ್ತಾರೆ. ಇದನ್ನು ಅಧಿಕಾರಿಗಳಿಗೆ ಹೇಳಿದರೆ, ಅವರು ಸ್ಪಂದಿಸುವುದಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.