<p><strong>ಯಾದಗಿರಿ:</strong> ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಗೋಟಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. </p>.<p>ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣದ ಆಧಾರ ಸ್ತಂಭವಾಗಿದೆ. ಹೀಗಾಗಿ, ಗ್ರಾಮದ ಶಾಲೆಯನ್ನು ಯಾವುದೇ ಕಾರಣಕ್ಕೂ ಬೇರೊಂದು ಶಾಲೆಯೊಂದಿಗೆ ವಿಲೀನಗೊಳಿಸುವುದನ್ನು ಒಪ್ಪುವುದಿಲ್ಲ. ಸರ್ಕಾರ ಕೂಡಲೇ ವಿಲೀನದ ನಿರ್ಧಾರವನ್ನು ಕೈಗಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಾದ್ಯಂತ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ. ಈ ಯೋಜನೆಯ ಭಾಗವನ್ನಾಗಿ ಹಲವು ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಿ, ಗೋಟಗಿ ಗ್ರಾಮದ ಶಾಲೆ ಸೇರಿದಂತೆ ಸುತ್ತಲಿ ಹಲವು ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳಿಗೆ ಸೇರಿಸಲು ನಿರ್ಧರಿಸಿದೆ’ ಎಂದು ಆರೋಪಿಸಿದರು.</p>.<p>‘ಸರ್ಕಾರದ ಆದೇಶದ ಪ್ರಕಾರ ಈ ಶಾಲೆಗಳ ನಿರ್ವಹಣೆಯು ಹೊರಗುತ್ತಿಗೆಯಿಂದ ನಡೆಯಬೇಕು. ತಮ್ಮ ಆದಾಯವನ್ನು ತಾನೇ ಸೃಷ್ಟಿಸಿಕೊಳ್ಳಬೇಕು ಎಂದಿದೆ. ಮಂಡ್ಯದಲ್ಲಿರುವ ಕೆಪಿಎಸ್ ಶಾಲೆಗೆ ಬರುವ ಮಕ್ಕಳು ತಿಂಗಳಿಗೆ ₹4,800 ಕೊಟ್ಟು ಬಸ್ಗಳಲ್ಲಿ ಶಾಲೆಗೆ ಬರಬೇಕು. ಗೋಟಗಿ ಶಾಲೆಗೂ ಅದೇ ಗತಿ ಬರಲಿದೆ. ಸರ್ಕಾರಿ ಶಾಲೆಗಳು ನಮ್ಮ ಹಕ್ಕು, ಅವುಗಳನ್ನು ಮುಚ್ಚಬಾರದು’ ಎಂದು ಆಗ್ರಹಿಸಿದರು.</p>.<p>ಗೋಟಗಿ ಗ್ರಾಮದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಮನೋಹರ್ ಮಾತನಾಡಿ, ‘ನಮಗೆ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಬೇಡ. ಅದು ಬಡವರ ವಿರೋಧಿ ಯೋಜನೆಯಾಗಿದೆ. ಏನೇ ಆದರೂ ನಮ್ಮೂರ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ’ ಎಂದರು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯೆ ಸೋನುಬಾಯಿ ಮಾತನಾಡಿ, ‘ಬಡವರು ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ನಮ್ಮ ತೆರಿಗೆಯ ಹಣದಲ್ಲಿ ಸರ್ಕಾರ ಶಾಲೆಗಳನ್ನು ನಡೆಸಲಿ. ನಾವು ಒಂದೇ ಒಂದು ರೂಪಾಯಿ ಸಹ ಕೊಡುವುದಿಲ್ಲ’ ಎಂದು ಹೇಳಿದರು.</p>.<p>ಪ್ರತಿಭಟನೆ ಎಐಡಿಎಸ್ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ನಾಗರಾಜ್, ಕುಮಾರ್, ದಿನೇಶ್, ಆಕಾಶ್, ಸುಭಾಷ್, ಅರುಣ್, ಚೆನ್ನಪ್ಪ, ಕಾರ್ತಿಕ್, ನಂದಿನಿ, ರವೀನಾ, ಶಿವಾನಿ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಗೋಟಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. </p>.<p>ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣದ ಆಧಾರ ಸ್ತಂಭವಾಗಿದೆ. ಹೀಗಾಗಿ, ಗ್ರಾಮದ ಶಾಲೆಯನ್ನು ಯಾವುದೇ ಕಾರಣಕ್ಕೂ ಬೇರೊಂದು ಶಾಲೆಯೊಂದಿಗೆ ವಿಲೀನಗೊಳಿಸುವುದನ್ನು ಒಪ್ಪುವುದಿಲ್ಲ. ಸರ್ಕಾರ ಕೂಡಲೇ ವಿಲೀನದ ನಿರ್ಧಾರವನ್ನು ಕೈಗಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಾದ್ಯಂತ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ. ಈ ಯೋಜನೆಯ ಭಾಗವನ್ನಾಗಿ ಹಲವು ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಿ, ಗೋಟಗಿ ಗ್ರಾಮದ ಶಾಲೆ ಸೇರಿದಂತೆ ಸುತ್ತಲಿ ಹಲವು ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳಿಗೆ ಸೇರಿಸಲು ನಿರ್ಧರಿಸಿದೆ’ ಎಂದು ಆರೋಪಿಸಿದರು.</p>.<p>‘ಸರ್ಕಾರದ ಆದೇಶದ ಪ್ರಕಾರ ಈ ಶಾಲೆಗಳ ನಿರ್ವಹಣೆಯು ಹೊರಗುತ್ತಿಗೆಯಿಂದ ನಡೆಯಬೇಕು. ತಮ್ಮ ಆದಾಯವನ್ನು ತಾನೇ ಸೃಷ್ಟಿಸಿಕೊಳ್ಳಬೇಕು ಎಂದಿದೆ. ಮಂಡ್ಯದಲ್ಲಿರುವ ಕೆಪಿಎಸ್ ಶಾಲೆಗೆ ಬರುವ ಮಕ್ಕಳು ತಿಂಗಳಿಗೆ ₹4,800 ಕೊಟ್ಟು ಬಸ್ಗಳಲ್ಲಿ ಶಾಲೆಗೆ ಬರಬೇಕು. ಗೋಟಗಿ ಶಾಲೆಗೂ ಅದೇ ಗತಿ ಬರಲಿದೆ. ಸರ್ಕಾರಿ ಶಾಲೆಗಳು ನಮ್ಮ ಹಕ್ಕು, ಅವುಗಳನ್ನು ಮುಚ್ಚಬಾರದು’ ಎಂದು ಆಗ್ರಹಿಸಿದರು.</p>.<p>ಗೋಟಗಿ ಗ್ರಾಮದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಮನೋಹರ್ ಮಾತನಾಡಿ, ‘ನಮಗೆ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಬೇಡ. ಅದು ಬಡವರ ವಿರೋಧಿ ಯೋಜನೆಯಾಗಿದೆ. ಏನೇ ಆದರೂ ನಮ್ಮೂರ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ’ ಎಂದರು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯೆ ಸೋನುಬಾಯಿ ಮಾತನಾಡಿ, ‘ಬಡವರು ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ನಮ್ಮ ತೆರಿಗೆಯ ಹಣದಲ್ಲಿ ಸರ್ಕಾರ ಶಾಲೆಗಳನ್ನು ನಡೆಸಲಿ. ನಾವು ಒಂದೇ ಒಂದು ರೂಪಾಯಿ ಸಹ ಕೊಡುವುದಿಲ್ಲ’ ಎಂದು ಹೇಳಿದರು.</p>.<p>ಪ್ರತಿಭಟನೆ ಎಐಡಿಎಸ್ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ನಾಗರಾಜ್, ಕುಮಾರ್, ದಿನೇಶ್, ಆಕಾಶ್, ಸುಭಾಷ್, ಅರುಣ್, ಚೆನ್ನಪ್ಪ, ಕಾರ್ತಿಕ್, ನಂದಿನಿ, ರವೀನಾ, ಶಿವಾನಿ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>