ಶನಿವಾರ ನಗರದ ವೀರಶೈವ ಲಿಂಗಾಯತ ಮತ್ತು ಬೇಡ ಜಂಗಮ ಸಮಾಜದ ಯುವ ಮುಖಂಡರು ಠಾಣೆಗೆ ತೆರಳಿ ಶಿಕ್ಷಕನ್ನು ಬಂಧಿಸುವಂತೆ ದೂರು ಸಲ್ಲಿಸಿದ್ದರು. ಅಲ್ಲದೆ ನಗರದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಸಾಜಿದ್ ಹುಸೇನ್ ಸುಲೇದಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವೀರಶೈವ ಲಿಂಗಾಯತ ಯುವ ಘಟಕದ ಅಧ್ಯಕ್ಷ ಶಂಭುಲಿಂಗ ಗೋಗಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.