ತಾಲ್ಲೂಕಿನ ಕೇಶ್ವಾರ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಉಮೇಶ ಗಾಳ (30) ಅವರು ಬುಧವಾರ ಬೆಳಿಗ್ಗೆ ಕ್ರಿಕೆಟ್ ಟೂರ್ನಮೆಂಟ್ ಗಾಗಿ ಸೇಡಂ ತಾಲ್ಲೂಕಿನ ಕಾನಾಗಡ್ಡ ಗ್ರಾಮಕ್ಕೆ ತೆರಳಿದ್ದರು. ಅಲ್ಲಿ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗೆ ಉಮೇಶ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು ಎಂದು ಕೇಶ್ವಾರ ಗ್ರಾಮಸ್ಥರು ತಿಳಿಸಿದರು.