<p><strong>ಹುಣಸಗಿ</strong>: ತಾಲ್ಲೂಕಿನ ಅಗ್ನಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮ ನಡೆಯಿತು.</p>.<p>ಹುಣಸಗಿಯ ತಹಶೀಲ್ದಾರ್ ಅಶೋಕಕುಮಾರ್ ಸುರಪುರಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ತಮ್ಮ ಕಚೇರಿ ಕೆಲಸ ಕಾರ್ಯಗಳಿಗಾಗಿ ಅಲೆದಾಡವದನ್ನು ತಪ್ಪಿಸ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯಕ್ರಮವನ್ನು ರೂಪಿಸಿದ್ದು, ಗ್ರಾಮದ ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.<br />ಗ್ರೇಡ್ 2 ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ್ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಹಿರೇಮಠ ಪಂಚಾಯಿತಿ ರಾಜ್ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತಂತೆ ಮಾಹಿತಿ ನೀಡಿದರು.<br />ಕಂದಾಯ ಇಲಾಖೆಗೆ ಸಂಬಂಧಿಸಿದ 8 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು.</p>.<p>ಕಂದಾಯ ಇಲಾಖೆಯ 39 , ಶಿಕ್ಷಣ ಇಲಾಖೆಯ 6 ಜೆಸ್ಕಾಂನ 1 , ಪಂಚಾಯಿತಿ ರಾಜ್ ಇಲಾಖೆಯಯ 15 ಅರ್ಜಿಗಳು , ಆರೋಗ್ಯ ಇಲಾಖೆಯ 1, ಸರ್ವೆ ಇಲಾಖೆಯ 2, ಸೇರಿದಂತೆ ಒಟ್ಟು 65 ಅರ್ಜಿಗಳನ್ನು ಸ್ವೀಕರಿಸಲಾಯಿತೆಂದು ತಿಳಿಸಲಾಯಿತು.</p>.<p>ಸಿದ್ಧನಗೌಡ ಪಾಟೀಲ್ ಕರಿಬಾವಿ, ಗ್ರಾ.ಪಂ. ಅಧ್ಯಕ್ಷೆ ಪರಮವ್ವ ಸಿದ್ರಾಮಪ್ಪ, ಉಪ ತಹಶೀಲ್ದಾರ್ ಪ್ರವೀಣಕುಮಾರ್ ಸಜ್ಜನ್, ಗವಿಸಿದ್ಧಯ್ಯ, ಗ್ರಾಮ ಲೆಕ್ಕಾಧಿಕಾರಿಗಳಾದ ಬಂದೇನವಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣಾ ಇದ್ದರು.</p>.<p>ಬಸವರಾಜ ಬಿರಾದಾರ್ ನಿರೂಪಿಸಿದರು. ಪಿಡಿಒ ನಬಿಸಾಬ್ ಡೋಣಿ ಸ್ವಾಗತಿಸಿದರು. ಅಮರೇಶ ಮಾಲಗತ್ತಿ<br />ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ತಾಲ್ಲೂಕಿನ ಅಗ್ನಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ' ಕಾರ್ಯಕ್ರಮ ನಡೆಯಿತು.</p>.<p>ಹುಣಸಗಿಯ ತಹಶೀಲ್ದಾರ್ ಅಶೋಕಕುಮಾರ್ ಸುರಪುರಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ತಮ್ಮ ಕಚೇರಿ ಕೆಲಸ ಕಾರ್ಯಗಳಿಗಾಗಿ ಅಲೆದಾಡವದನ್ನು ತಪ್ಪಿಸ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯಕ್ರಮವನ್ನು ರೂಪಿಸಿದ್ದು, ಗ್ರಾಮದ ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.<br />ಗ್ರೇಡ್ 2 ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ್ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯ ಹಿರೇಮಠ ಪಂಚಾಯಿತಿ ರಾಜ್ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತಂತೆ ಮಾಹಿತಿ ನೀಡಿದರು.<br />ಕಂದಾಯ ಇಲಾಖೆಗೆ ಸಂಬಂಧಿಸಿದ 8 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು.</p>.<p>ಕಂದಾಯ ಇಲಾಖೆಯ 39 , ಶಿಕ್ಷಣ ಇಲಾಖೆಯ 6 ಜೆಸ್ಕಾಂನ 1 , ಪಂಚಾಯಿತಿ ರಾಜ್ ಇಲಾಖೆಯಯ 15 ಅರ್ಜಿಗಳು , ಆರೋಗ್ಯ ಇಲಾಖೆಯ 1, ಸರ್ವೆ ಇಲಾಖೆಯ 2, ಸೇರಿದಂತೆ ಒಟ್ಟು 65 ಅರ್ಜಿಗಳನ್ನು ಸ್ವೀಕರಿಸಲಾಯಿತೆಂದು ತಿಳಿಸಲಾಯಿತು.</p>.<p>ಸಿದ್ಧನಗೌಡ ಪಾಟೀಲ್ ಕರಿಬಾವಿ, ಗ್ರಾ.ಪಂ. ಅಧ್ಯಕ್ಷೆ ಪರಮವ್ವ ಸಿದ್ರಾಮಪ್ಪ, ಉಪ ತಹಶೀಲ್ದಾರ್ ಪ್ರವೀಣಕುಮಾರ್ ಸಜ್ಜನ್, ಗವಿಸಿದ್ಧಯ್ಯ, ಗ್ರಾಮ ಲೆಕ್ಕಾಧಿಕಾರಿಗಳಾದ ಬಂದೇನವಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣಾ ಇದ್ದರು.</p>.<p>ಬಸವರಾಜ ಬಿರಾದಾರ್ ನಿರೂಪಿಸಿದರು. ಪಿಡಿಒ ನಬಿಸಾಬ್ ಡೋಣಿ ಸ್ವಾಗತಿಸಿದರು. ಅಮರೇಶ ಮಾಲಗತ್ತಿ<br />ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>