ಸೈದಾಪುರ: ಸಮೀಪದ ಸಾವೂರು ಗ್ರಾಮದಲ್ಲಿ ಕೂಲಿ ಕಾರ್ಮಿಕರು, ಬಡವರು ಮತ್ತು ನಿರ್ಗತಿಕರಿಗೆ ಅಜೀಂ ಪ್ರೇಮ್ಜಿ ಸಂಸ್ಥೆಯ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.
ಈ ವೇಳೆ ಗ್ರಾ.ಪಂ ಸದಸ್ಯ ಮಲ್ಲು ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಉದ್ದೇಶದಿಂದ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಇದರಿಂದ ನಮ್ಮಂತಹ ಬಡ ವರ್ಗದವರಿಗೆ ಒಂದೊಂತ್ತಿನ ಊಟಕ್ಕೂ ಪರದಡಾವಂತಾಗಿದೆ. ಇಂತಹ ಸಂದರ್ಭದಲ್ಲಿ ಈ ಸಂಸ್ಥೆಯವರು ಮನೆ ಬಾಗಿಲಿಗೆ ಬಂದು ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
ನಂತರ ಎಪಿಎಫ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಆರ್ ಚಿಲಾಮಣಿ ಮಾತನಾಡಿದರು.
ಗ್ರಾ.ಪಂ ಸದಸ್ಯ ಮಲ್ಲು, ನಾಗರಾಜ, ಭಾಸ್ಕರ, ಎಸ್ಡಿಎಂಸಿ ಅಧ್ಯಕ್ಷ ಅಬ್ಬಾಯ್ಯ, ಶೇಖರ, ಸೇರಿದಂತೆ ಇತರರು ಇದ್ದರು.