<p><strong>ಗುರುಮಠಕಲ್: </strong>ಕೇಂದ್ರದ ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ಕೈಬಿಡಲು ಆಗ್ರಹಿಸಿ ದೇಶದಾದ್ಯಂತ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ಗೆ ಪಟ್ಟಣದಲ್ಲಿ ಯಾವುದೇಬೆಂಬಲ ಸಿಗದೆ ದಿನನಿತ್ಯದಂತೆ ವ್ಯಾಪಾರ ವಾಹಿವಾಟು ಮುಂದುವರೆದದ್ದು ಕಂಡುಬಂದಿತು.</p>.<p>ಮಂಗಳವಾರ ಬೆಳಗ್ಗೆಯಿಂದಲೂ ಅಂಗಡಿ ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ, ವ್ಯಾಪಾರ ವಾಹಿವಾಟು ಎಂದಿನಂತೆ ಇತ್ತು.</p>.<p>ಬಂದ್ ಬೆಂಬಲಿಸಿ ಬಿಎಸ್ಪಿ ಕಾರ್ಯಕರ್ತರು ತಹಶೀಲ್ದಾರ್ ಸಂಗಮೇಶ ಜಿಡಗೆ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ, ಕೇಂದ್ರದ ರೈತ ವಿರೋಧಿ ನೀತಿಗಳನ್ನು ಕೂಡಲೇಕೈಬಿಡುವಂತೆ ಆಗ್ರಹಿಸಿ ಮನವಿ ಪತ್ರವನ್ನು ಅಧಿಕಾರಿಗೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.</p>.<p>ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಗಳು ತುಂಬಾ ಅಮಾನವೀಯವಾಗಿವೆ. ಕೂಡಲೇ ಆ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಭೀಮಶಪ್ಪ ಗಾಡದನ, ಅಶೋಕ ಗಿರಿಗಿರಿ, ಭೀಮಪ್ಪ ಮಾಧ್ವಾರ, ಮಹಾದೇವಪ್ಪ ಚಪೆಟ್ಲಾ, ಪ್ರಕಾಶ ಬಂಟು, ಭೀಮು, ಧನಂಜಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್: </strong>ಕೇಂದ್ರದ ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ಕೈಬಿಡಲು ಆಗ್ರಹಿಸಿ ದೇಶದಾದ್ಯಂತ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ಗೆ ಪಟ್ಟಣದಲ್ಲಿ ಯಾವುದೇಬೆಂಬಲ ಸಿಗದೆ ದಿನನಿತ್ಯದಂತೆ ವ್ಯಾಪಾರ ವಾಹಿವಾಟು ಮುಂದುವರೆದದ್ದು ಕಂಡುಬಂದಿತು.</p>.<p>ಮಂಗಳವಾರ ಬೆಳಗ್ಗೆಯಿಂದಲೂ ಅಂಗಡಿ ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ, ವ್ಯಾಪಾರ ವಾಹಿವಾಟು ಎಂದಿನಂತೆ ಇತ್ತು.</p>.<p>ಬಂದ್ ಬೆಂಬಲಿಸಿ ಬಿಎಸ್ಪಿ ಕಾರ್ಯಕರ್ತರು ತಹಶೀಲ್ದಾರ್ ಸಂಗಮೇಶ ಜಿಡಗೆ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ, ಕೇಂದ್ರದ ರೈತ ವಿರೋಧಿ ನೀತಿಗಳನ್ನು ಕೂಡಲೇಕೈಬಿಡುವಂತೆ ಆಗ್ರಹಿಸಿ ಮನವಿ ಪತ್ರವನ್ನು ಅಧಿಕಾರಿಗೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.</p>.<p>ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಗಳು ತುಂಬಾ ಅಮಾನವೀಯವಾಗಿವೆ. ಕೂಡಲೇ ಆ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಭೀಮಶಪ್ಪ ಗಾಡದನ, ಅಶೋಕ ಗಿರಿಗಿರಿ, ಭೀಮಪ್ಪ ಮಾಧ್ವಾರ, ಮಹಾದೇವಪ್ಪ ಚಪೆಟ್ಲಾ, ಪ್ರಕಾಶ ಬಂಟು, ಭೀಮು, ಧನಂಜಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>