<p><strong>ಗುರುಮಠಕಲ್ (ಯಾದಗಿರಿ ಜಿಲ್ಲೆ):</strong> ಅನುಮತಿ ಸಿಗದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶನಿವಾರ (ಅ.25) ನಡೆಯಬೇಕಿದ್ದ ಆರ್ಎಸ್ಎಸ್ ಪಥಸಂಚಲನ ಮುಂದೂಡಲಾಗಿದೆ.</p>.<p>ಅನುಮತಿ ಕೋರಿ ಆಯೋಜಕರು ಅ.21ರಂದು ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದರು. ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಗುರುವಾರ ತಹಶೀಲ್ದಾರ್ ಕಚೇರಿಗೆ ತೆರಳಿದ್ದ ಆಯೋಜಕರಿಗೆ, ‘ನನಗೆ ಅನುಮತಿ ನೀಡುವ ಅಧಿಕಾರ ಇಲ್ಲ’ ಎಂದು ತಹಶೀಲ್ದಾರ್ ಸ್ಪಷ್ಟನೆ ಕೊಟ್ಟು ಕಳುಹಿಸಿದ್ದರು.</p>.<p>ಅದೇ ದಿನ ಆಯೋಜಕರು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತರಾತುರಿಯಲ್ಲಿ ಅನುಮತಿ ನೀಡಲಾಗದು. ಮತ್ತೊಂದು ದಿನ ನಿಗದಿಗೊಳಿಸಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.</p>.<p>‘ಸುತ್ತೋಲೆ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಪಡೆಯಬೇಕು. ಅನುಮತಿ ಸಿಗದೆ ಇದ್ದರೆ ತಿರಸ್ಕೃತ ಆಗುತ್ತದೆ. ಆಯೋಜಕರ ಮತ್ತೊಂದು ಅರ್ಜಿ ಪರಿಶೀಲನೆ ಹಂತದಲ್ಲಿದೆ. ಎಲ್ಲವೂ ಸರಿ ಇದ್ದರೆ ಅರ್ಜಿಯನ್ನು ಪರಿಗಣಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್ (ಯಾದಗಿರಿ ಜಿಲ್ಲೆ):</strong> ಅನುಮತಿ ಸಿಗದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶನಿವಾರ (ಅ.25) ನಡೆಯಬೇಕಿದ್ದ ಆರ್ಎಸ್ಎಸ್ ಪಥಸಂಚಲನ ಮುಂದೂಡಲಾಗಿದೆ.</p>.<p>ಅನುಮತಿ ಕೋರಿ ಆಯೋಜಕರು ಅ.21ರಂದು ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದರು. ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಗುರುವಾರ ತಹಶೀಲ್ದಾರ್ ಕಚೇರಿಗೆ ತೆರಳಿದ್ದ ಆಯೋಜಕರಿಗೆ, ‘ನನಗೆ ಅನುಮತಿ ನೀಡುವ ಅಧಿಕಾರ ಇಲ್ಲ’ ಎಂದು ತಹಶೀಲ್ದಾರ್ ಸ್ಪಷ್ಟನೆ ಕೊಟ್ಟು ಕಳುಹಿಸಿದ್ದರು.</p>.<p>ಅದೇ ದಿನ ಆಯೋಜಕರು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತರಾತುರಿಯಲ್ಲಿ ಅನುಮತಿ ನೀಡಲಾಗದು. ಮತ್ತೊಂದು ದಿನ ನಿಗದಿಗೊಳಿಸಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.</p>.<p>‘ಸುತ್ತೋಲೆ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಪಡೆಯಬೇಕು. ಅನುಮತಿ ಸಿಗದೆ ಇದ್ದರೆ ತಿರಸ್ಕೃತ ಆಗುತ್ತದೆ. ಆಯೋಜಕರ ಮತ್ತೊಂದು ಅರ್ಜಿ ಪರಿಶೀಲನೆ ಹಂತದಲ್ಲಿದೆ. ಎಲ್ಲವೂ ಸರಿ ಇದ್ದರೆ ಅರ್ಜಿಯನ್ನು ಪರಿಗಣಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>