<p><strong>ಯಾದಗಿರಿ: ‘</strong>ಕೆಕೆಆರ್ಡಿಬಿ ಮ್ಯಾಕ್ರೊ ಕ್ರಿಯಾ ಯೋಜನೆಯಡಿ ಜಿಲ್ಲೆಯ ಸ್ಥಳೀಯ ಲೇಖಕರು ಬರೆದ ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಪ್ರಸಕ್ತ ಓದುಗರ ಅಭಿರುಚಿಗೆ ಅನುಗುಣವಾದ ಪುಸ್ತಕಗಳನ್ನು ಪುನರ್ ಆಯ್ಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಬಿ. ಸುಶೀಲಾ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕೆಕೆಆರ್ಡಿಬಿ ಮ್ಯಾಕ್ರೊ ಯೋಜನೆಯಡಿ ಸ್ಥಳೀಯ ಲೇಖಕರ ಪುಸ್ತಕ ಖರೀದಿಯ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೆಕೆಆರ್ಡಿಬಿ ಕಾರ್ಯದರ್ಶಿ ಅವರ ನಿರ್ದೇಶನದಂತೆ 2024-25ನೇ ಸಾಲಿನ ಕ್ರಿಯಾ ಯೋಜನೆಯಡಿ ಪುಸ್ತಕ ಖರೀದಿಗಾಗಿ ₹25 ಲಕ್ಷ ಮಂಜೂರಾಗಿದೆ. ಅನುದಾನಕ್ಕೆ ಅನುಗುಣವಾಗಿ ನಿಗದಿತ ದರಗಳಲ್ಲಿ ಪ್ರತಿ ಪುಸ್ತಕ ತಲಾ 1,300 ಪ್ರತಿಗಳನ್ನು ಖರೀದಿಸಬೇಕು. ಇವನ್ನು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಸರಬರಾಜು ಮಾಡಬೇಕು’ ಎಂದು ಸೂಚಿಸಿದರು.</p>.<p>‘ಪುಸ್ತಕ ಖರೀದಿಸಲು ಜಿಲ್ಲೆಯಲ್ಲಿ 135 ಅರ್ಜಿಗಳನ್ನು ಸ್ವೀಕೃತವಾಗಿದ್ದು, ಅವುಗಳಲ್ಲಿ ಅರ್ಹತೆಯುಳ್ಳ ಅರ್ಜಿಗಳನ್ನು ಮಾತ್ರ ಪರಿಶೀಲಿಸಲು ಮತ್ತು ಜಿಲ್ಲೆಯ ಸ್ಥಳಿಯ ಲೇಖಕರೆಂದು ಗುರುತಿಸಲು ಪ್ರಕಟಣೆಯಲ್ಲಿ ತಿಳಿಸಿರುವಂತೆ ಅರ್ಜಿಯೊಂದಿಗೆ ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಸಲ್ಲಿಸಿದವರ 2023-24ನೇ ಸಾಲಿನ ಪುಸ್ತಕಗಳ ಖರೀದಿಗೆ ಆದ್ಯತೆ ನೀಡಲು ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ವರದಿ ಸಲ್ಲಿಸಿ’ ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿ ಸೂಚಿಸಿದರು.</p>.<p>ಜಿಲ್ಲಾ ಗ್ರಂಥಾಲಯ ಅಧಿಕಾರಿ ಜಯಪ್ರಕಾಶ, ಮೆಹಬೂಬ್ ಪಟೇಲ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: ‘</strong>ಕೆಕೆಆರ್ಡಿಬಿ ಮ್ಯಾಕ್ರೊ ಕ್ರಿಯಾ ಯೋಜನೆಯಡಿ ಜಿಲ್ಲೆಯ ಸ್ಥಳೀಯ ಲೇಖಕರು ಬರೆದ ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಪ್ರಸಕ್ತ ಓದುಗರ ಅಭಿರುಚಿಗೆ ಅನುಗುಣವಾದ ಪುಸ್ತಕಗಳನ್ನು ಪುನರ್ ಆಯ್ಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಬಿ. ಸುಶೀಲಾ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕೆಕೆಆರ್ಡಿಬಿ ಮ್ಯಾಕ್ರೊ ಯೋಜನೆಯಡಿ ಸ್ಥಳೀಯ ಲೇಖಕರ ಪುಸ್ತಕ ಖರೀದಿಯ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕೆಕೆಆರ್ಡಿಬಿ ಕಾರ್ಯದರ್ಶಿ ಅವರ ನಿರ್ದೇಶನದಂತೆ 2024-25ನೇ ಸಾಲಿನ ಕ್ರಿಯಾ ಯೋಜನೆಯಡಿ ಪುಸ್ತಕ ಖರೀದಿಗಾಗಿ ₹25 ಲಕ್ಷ ಮಂಜೂರಾಗಿದೆ. ಅನುದಾನಕ್ಕೆ ಅನುಗುಣವಾಗಿ ನಿಗದಿತ ದರಗಳಲ್ಲಿ ಪ್ರತಿ ಪುಸ್ತಕ ತಲಾ 1,300 ಪ್ರತಿಗಳನ್ನು ಖರೀದಿಸಬೇಕು. ಇವನ್ನು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಸರಬರಾಜು ಮಾಡಬೇಕು’ ಎಂದು ಸೂಚಿಸಿದರು.</p>.<p>‘ಪುಸ್ತಕ ಖರೀದಿಸಲು ಜಿಲ್ಲೆಯಲ್ಲಿ 135 ಅರ್ಜಿಗಳನ್ನು ಸ್ವೀಕೃತವಾಗಿದ್ದು, ಅವುಗಳಲ್ಲಿ ಅರ್ಹತೆಯುಳ್ಳ ಅರ್ಜಿಗಳನ್ನು ಮಾತ್ರ ಪರಿಶೀಲಿಸಲು ಮತ್ತು ಜಿಲ್ಲೆಯ ಸ್ಥಳಿಯ ಲೇಖಕರೆಂದು ಗುರುತಿಸಲು ಪ್ರಕಟಣೆಯಲ್ಲಿ ತಿಳಿಸಿರುವಂತೆ ಅರ್ಜಿಯೊಂದಿಗೆ ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಸಲ್ಲಿಸಿದವರ 2023-24ನೇ ಸಾಲಿನ ಪುಸ್ತಕಗಳ ಖರೀದಿಗೆ ಆದ್ಯತೆ ನೀಡಲು ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ವರದಿ ಸಲ್ಲಿಸಿ’ ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿ ಸೂಚಿಸಿದರು.</p>.<p>ಜಿಲ್ಲಾ ಗ್ರಂಥಾಲಯ ಅಧಿಕಾರಿ ಜಯಪ್ರಕಾಶ, ಮೆಹಬೂಬ್ ಪಟೇಲ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>