<p><strong>ಗುರುಮಠಕಲ್</strong>: ಪಟ್ಟಣದಲ್ಲಿ ಶನಿವಾರ(ಜ.31) ರಂದು ‘ಹಿಂದೂ ಸಮ್ಮೇಳನ ಶೋಭಾಯಾತ್ರೆ’ ಜರುಗಲಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಪನ್ನಾಲಾಲ್ ಪಟೇಲ್, ಉಪಾಧ್ಯಕ್ಷ ದೊಡ್ಲ ಪಂಡರಿ ತಿಳಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಕಾರ್ಯಕ್ರಮದ ಆಮಂತ್ರಣ ಮತ್ತು ಕರಪತ್ರ ಬಿಡುಗಡೆ ಹಾಗೂ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಶನಿವಾರ ಮದ್ಯಾಹ್ನ 3 ಗಂಟೆಗೆ ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಲಾಗುವುದು’ ಎಂದರು.</p>.<p>ಗಂಗಾಪರಮೇಶ್ವರಿ ವೃತ್ತ, ಅಂಬಿಗರಚೌಡಯ್ಯ ವೃತ್ತ ಸೇರಿದಂತೆ ಮುಖ್ಯ ರಸ್ತೆಗಳ ಮೂಲಕ ಶೋಭಾಯಾತ್ರೆಯು ರಾಮನಗರ ಬಡಾವಣೆಯಲ್ಲಿ ಸಂಪನ್ನಗೊಳ್ಳಲಿದೆ. ಸಂಜೆ 5ಗಂಟೆಗೆ ರಾಮನಗರ ಬಡಾವಣೆಯಲ್ಲಿ ಕಾರ್ಯಕ್ರಮ ಆರಂಭಗೊಳ್ಳಲಿದೆ.</p>.<p>ಹೈದರಾಬಾದ್ ನಗರದ ಜಗದ್ಗಿರಿಗುಟ್ಟ ಮಾತಾ ಮಾಣಿಕೇಶ್ವರಿ ಆಶ್ರಮ ವೇದಪಾಠ ಶಾಲೆಯ ಮಲ್ಲಿಕಾರ್ಜುನ ಸ್ವಾಮಿ ಸಾನ್ನಿಧ್ಯದಲ್ಲಿ ಹುಬ್ಬಳ್ಳಿಯ ಮಲ್ಲಿಕಾರ್ಜುನ ಬಾಳಿಕಾಯಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ವಿಶಾಲವಾದ ಜನಜಾಗೃತಿ, ಜನತಾ ಜನಾರ್ಧನನ ವಿಶ್ವರೂಪ ದರ್ಶನ, ಹಿಂದೂಗಳಲ್ಲಿ ಸೋದರತೆ ಭಾವದ ಅಭಿವ್ಯಕ್ತಗೊಳಿಸುವ, ವೇಷ-ಭಾಷೆ, ಪಂತ-ಪೂಜೆ, ವಿಧಿ-ವಿಧಾನಗಳ ಭಿನ್ನತೆಯಲ್ಲೂ ಏಕತೆ, ಸ್ವಂತಕ್ಕೆ ಸ್ವಲ್ಪ-ಸಮಾಜಕ್ಕೆ ಸರ್ವಸ್ವ ಎನ್ನುವ ಕಲ್ಪನೆಯ ಉದ್ದೇಶಗಳೊಂದಿಗೆ ಕಾರ್ಯಕ್ರಮ ಆಯೋಜಿಸಿದ್ದಾಗಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಸತೀಶ ತಿವಾರಿ, ಶ್ರೀನಿವಾಸ ಯಾದವ, ಶಿವಾನಂದ ಬೂದಿ, ಗುರುರಾಜ ಜೋಷಿ, ಮೋಹನ ಬುರುಬುರೆ, ಕಿಶೋರ ಢಗೆ, ಮಲ್ಲಿಕಾರ್ಜುನ ಹಿರೇಮಠ, ನಾರಾಯಣ ಮಜ್ಜಿಗೆ, ನರಸಿಂಹಲು ಗಂಗನೋಳ ಸೇರಿದಂತೆ ಸಮಿತಿ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್</strong>: ಪಟ್ಟಣದಲ್ಲಿ ಶನಿವಾರ(ಜ.31) ರಂದು ‘ಹಿಂದೂ ಸಮ್ಮೇಳನ ಶೋಭಾಯಾತ್ರೆ’ ಜರುಗಲಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಪನ್ನಾಲಾಲ್ ಪಟೇಲ್, ಉಪಾಧ್ಯಕ್ಷ ದೊಡ್ಲ ಪಂಡರಿ ತಿಳಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಕಾರ್ಯಕ್ರಮದ ಆಮಂತ್ರಣ ಮತ್ತು ಕರಪತ್ರ ಬಿಡುಗಡೆ ಹಾಗೂ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಶನಿವಾರ ಮದ್ಯಾಹ್ನ 3 ಗಂಟೆಗೆ ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಲಾಗುವುದು’ ಎಂದರು.</p>.<p>ಗಂಗಾಪರಮೇಶ್ವರಿ ವೃತ್ತ, ಅಂಬಿಗರಚೌಡಯ್ಯ ವೃತ್ತ ಸೇರಿದಂತೆ ಮುಖ್ಯ ರಸ್ತೆಗಳ ಮೂಲಕ ಶೋಭಾಯಾತ್ರೆಯು ರಾಮನಗರ ಬಡಾವಣೆಯಲ್ಲಿ ಸಂಪನ್ನಗೊಳ್ಳಲಿದೆ. ಸಂಜೆ 5ಗಂಟೆಗೆ ರಾಮನಗರ ಬಡಾವಣೆಯಲ್ಲಿ ಕಾರ್ಯಕ್ರಮ ಆರಂಭಗೊಳ್ಳಲಿದೆ.</p>.<p>ಹೈದರಾಬಾದ್ ನಗರದ ಜಗದ್ಗಿರಿಗುಟ್ಟ ಮಾತಾ ಮಾಣಿಕೇಶ್ವರಿ ಆಶ್ರಮ ವೇದಪಾಠ ಶಾಲೆಯ ಮಲ್ಲಿಕಾರ್ಜುನ ಸ್ವಾಮಿ ಸಾನ್ನಿಧ್ಯದಲ್ಲಿ ಹುಬ್ಬಳ್ಳಿಯ ಮಲ್ಲಿಕಾರ್ಜುನ ಬಾಳಿಕಾಯಿ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ವಿಶಾಲವಾದ ಜನಜಾಗೃತಿ, ಜನತಾ ಜನಾರ್ಧನನ ವಿಶ್ವರೂಪ ದರ್ಶನ, ಹಿಂದೂಗಳಲ್ಲಿ ಸೋದರತೆ ಭಾವದ ಅಭಿವ್ಯಕ್ತಗೊಳಿಸುವ, ವೇಷ-ಭಾಷೆ, ಪಂತ-ಪೂಜೆ, ವಿಧಿ-ವಿಧಾನಗಳ ಭಿನ್ನತೆಯಲ್ಲೂ ಏಕತೆ, ಸ್ವಂತಕ್ಕೆ ಸ್ವಲ್ಪ-ಸಮಾಜಕ್ಕೆ ಸರ್ವಸ್ವ ಎನ್ನುವ ಕಲ್ಪನೆಯ ಉದ್ದೇಶಗಳೊಂದಿಗೆ ಕಾರ್ಯಕ್ರಮ ಆಯೋಜಿಸಿದ್ದಾಗಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಸತೀಶ ತಿವಾರಿ, ಶ್ರೀನಿವಾಸ ಯಾದವ, ಶಿವಾನಂದ ಬೂದಿ, ಗುರುರಾಜ ಜೋಷಿ, ಮೋಹನ ಬುರುಬುರೆ, ಕಿಶೋರ ಢಗೆ, ಮಲ್ಲಿಕಾರ್ಜುನ ಹಿರೇಮಠ, ನಾರಾಯಣ ಮಜ್ಜಿಗೆ, ನರಸಿಂಹಲು ಗಂಗನೋಳ ಸೇರಿದಂತೆ ಸಮಿತಿ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>