<p><strong>ವಡಗೇರಾ:</strong> ತಾಲ್ಲೂಕಿನ ಪ್ರಸಿದ್ಧ ಐತಿಹಾಸಿ ಕ್ಷೇತ್ರವಾದ ಹಾಲಗೇರಾ ಗ್ರಾಮದ ಆದಿಶಕ್ತಿ ಹಾಗೂ ಗ್ರಾಮದೇವತೆಯಾದ ಯಲ್ಲಮ್ಮದೇವಿಯ ಜಾತ್ರೆಯ ರಥೋತ್ಸವವು ರವಿವಾರ ಭಾರತ ಹುಣ್ಣಿಮೆಯ ದಿನದಂದು ಸಂಜೆ 5.40ಕ್ಕೆ ಭಕ್ತರ ಜಯ ಘೋಷದೊಂದಿಗೆ ಅತ್ಯಂತ ಸಂಭ್ರಮದಿಂದ ಜರುಗಿತು.</p>.<p>ಇದಕ್ಕೂ ಮುಂಚೆ ರಥಕ್ಕೆ ಫಲ ಪುಷ್ಪ ಹೂವು ಹಣ್ಣುಗಳಿಂದ ಅಲಂಕರಿಸಲಾಗಿತ್ತು. ರಥಕ್ಕೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಕಬ್ಬಿನ ತುಣುಕುಗಳನ್ನು ಎಸೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು .</p>.<p>ರಥೋತ್ಸವದ ನಂತರ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ದೇವಾಲಯದ ಸಮಿತಿಯವರು ಆಯೋಜಿಸಿದ್ದರು.</p>.<p>ದೇವಿಯ ಜಾತ್ರೆಗೆ ಆಂಧ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಹಾಗೂ ಸುತ್ತ ಮುತ್ತಲಿನ ಭಕ್ತರಲ್ಲದೆ ಜಿಲ್ಲೆಯ ವಿವಿಧ ರಾಜಕೀಯ ಪಕ್ಷದ ಜನಪ್ರತಿನಿಧಿಗಳು, ಗ್ರಾಮದ ಮುಖಂಡರು ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಆಗಮಿಸಿದ್ದರು</p>.<p>ಜಾತ್ರೆಯಲ್ಲಿ ಕುಂಕುಮ, ಅರಿಸಿಣ, ಬೆಲ್ಲದ ಜಿಲೇಬಿ, ಖಾರಾ ಭಜಿ, ಬೆಂಡು, ಬತಾಸು, ಮಂಡಾಳು ಖರೀದಿ ಹಾಗೂ ಮಕ್ಕಳ ಆಟಿಕೆ ಸಾಮಾನುಗಳ ವ್ಯಾಪಾರ ಜೋರಾಗಿತ್ತು. ಜಾತ್ರೆಗೆ ಪಾಲಕರೊಂದಿಗೆ ಬಂದ ಮಕ್ಕಳು ಪಾಲಕರ ಬುದ ಮೇಲೆ ಕುಳಿತುಕೊಂಡು ರಥೋತ್ಸವದ ಆನಂದವನ್ನು ಸವಿದರು.</p>.<p>ಜಾತ್ರೆಯಲ್ಲಿ ಅಹಿತರ ಘಟನೆಗಳು ಜರುಗದಂತೆ, ಸುಗಮ ಸಂಚಾರಕ್ಕೆ ತೊಂದರೆಯಾದಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೆಬೂಬ ಅಲಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ತಾಲ್ಲೂಕಿನ ಪ್ರಸಿದ್ಧ ಐತಿಹಾಸಿ ಕ್ಷೇತ್ರವಾದ ಹಾಲಗೇರಾ ಗ್ರಾಮದ ಆದಿಶಕ್ತಿ ಹಾಗೂ ಗ್ರಾಮದೇವತೆಯಾದ ಯಲ್ಲಮ್ಮದೇವಿಯ ಜಾತ್ರೆಯ ರಥೋತ್ಸವವು ರವಿವಾರ ಭಾರತ ಹುಣ್ಣಿಮೆಯ ದಿನದಂದು ಸಂಜೆ 5.40ಕ್ಕೆ ಭಕ್ತರ ಜಯ ಘೋಷದೊಂದಿಗೆ ಅತ್ಯಂತ ಸಂಭ್ರಮದಿಂದ ಜರುಗಿತು.</p>.<p>ಇದಕ್ಕೂ ಮುಂಚೆ ರಥಕ್ಕೆ ಫಲ ಪುಷ್ಪ ಹೂವು ಹಣ್ಣುಗಳಿಂದ ಅಲಂಕರಿಸಲಾಗಿತ್ತು. ರಥಕ್ಕೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಕಬ್ಬಿನ ತುಣುಕುಗಳನ್ನು ಎಸೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು .</p>.<p>ರಥೋತ್ಸವದ ನಂತರ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ದೇವಾಲಯದ ಸಮಿತಿಯವರು ಆಯೋಜಿಸಿದ್ದರು.</p>.<p>ದೇವಿಯ ಜಾತ್ರೆಗೆ ಆಂಧ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಹಾಗೂ ಸುತ್ತ ಮುತ್ತಲಿನ ಭಕ್ತರಲ್ಲದೆ ಜಿಲ್ಲೆಯ ವಿವಿಧ ರಾಜಕೀಯ ಪಕ್ಷದ ಜನಪ್ರತಿನಿಧಿಗಳು, ಗ್ರಾಮದ ಮುಖಂಡರು ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಆಗಮಿಸಿದ್ದರು</p>.<p>ಜಾತ್ರೆಯಲ್ಲಿ ಕುಂಕುಮ, ಅರಿಸಿಣ, ಬೆಲ್ಲದ ಜಿಲೇಬಿ, ಖಾರಾ ಭಜಿ, ಬೆಂಡು, ಬತಾಸು, ಮಂಡಾಳು ಖರೀದಿ ಹಾಗೂ ಮಕ್ಕಳ ಆಟಿಕೆ ಸಾಮಾನುಗಳ ವ್ಯಾಪಾರ ಜೋರಾಗಿತ್ತು. ಜಾತ್ರೆಗೆ ಪಾಲಕರೊಂದಿಗೆ ಬಂದ ಮಕ್ಕಳು ಪಾಲಕರ ಬುದ ಮೇಲೆ ಕುಳಿತುಕೊಂಡು ರಥೋತ್ಸವದ ಆನಂದವನ್ನು ಸವಿದರು.</p>.<p>ಜಾತ್ರೆಯಲ್ಲಿ ಅಹಿತರ ಘಟನೆಗಳು ಜರುಗದಂತೆ, ಸುಗಮ ಸಂಚಾರಕ್ಕೆ ತೊಂದರೆಯಾದಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೆಬೂಬ ಅಲಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>