ನಾರಾಯಣಪುರ:ಹಲವಾರು ಕಡೆಗಳಲ್ಲಿ ಹಂಚಿ ಹರಿದು ಹೋಗಿದ್ದ ವಚನಕಾರರ ವಚನಗಳನ್ನು, ತಾಡೋಲೆಗಳನ್ನು ಸಂಶೋಧಿಸಿ, ಸಂಗ್ರಹಿಸಿ ಅವುಗಳನ್ನು ಕಾಪಾಡಿ ಸಮಗ್ರ ವಚನ ಸಾಹಿತ್ಯವನ್ನು ಉಳಿಸಿ ಬೆಳಿಸಿದ ಕೀರ್ತಿ ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಪ್ರಾಚಾರ್ಯ ಡಾ.ಜಗದೀಶ ನೂಲಿನವರ ಹೇಳಿದರು.
ಪಟ್ಟಣದ ಮಾತೋಶ್ರೀ ನಿಂಬೆಮ್ಮ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಫ.ಗು.ಹಳಕಟ್ಟಿಯವರ ಜಯಂತಿಯಲ್ಲಿ ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಪೂಜೆ ಸಲ್ಲಿಸಿದ ಮಾತನಾಡಿದರು.
ಈ ವೇಳೆ ಪದವಿ ವಿದ್ಯಾಲಯದ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.