ಸುರಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್) ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಚಂದ್ರಕಾಂತ ಬಸಣ್ಣ ನಾಗೂರು ಹೆಗ್ಗಣದೊಡ್ಡಿ ಅವರು ಶುಕ್ರವಾರ ಅಯ್ಕೆಯಾದರು.
ನೇಮಕಾತಿ ಪತ್ರ ನೀಡಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಗೌಡ ಸುಬೇದಾರ್, ‘ನೂತನ ಅಧ್ಯಕ್ಷರು ಸಂಘದ ತತ್ವಗಳನ್ನು ಪಾಲಿಸಬೇಕು. ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳದೆ ಎಲ್ಲ ಸಾಮಾಜಿಕ ಪಿಡುಗುಗಳಿಂದ ದೂರವಿದ್ದುಕೊಂಡು ಕಾರ್ಯ ನಿರ್ವಹಿಸಬೇಕು. ಪ್ರಾಮಾಣಿಕತೆಯೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನಿಯಮನುಸಾರ ಪರಿಹಾರ ಕ್ರಮ ವಹಿಸಬೇಕು. ತಾಲ್ಲೂಕಿನಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಸಂಘದ ಸಂಘಟನೆಯನ್ನು ಪ್ರಾರಂಭ ಮಾಡಬೇಕು’ ಎಂದು ತಿಳಿಸಿದರು.
ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಡಾ. ಹನೀಫ್ ಹತ್ತಿಕುಣಿ, ಜಿಲ್ಲಾ ಸಹ ಕಾರ್ಯದರ್ಶಿ ಮಲ್ಲನಗೌಡ ಮುದ್ನೂರು, ಹುಣಸಗಿ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ, ಸಗರ ಗ್ರಾಮ ಘಟಕದ ಉಪಾಧ್ಯಕ್ಷ ಚಂದಪ್ಪ ಸೇರಿ ಇನ್ನಿತರರಿದ್ದರು.