ಯಾದಗಿರಿ ತಾಲ್ಲೂಕಿನ ಗುರುಮಠಕಲ್ ಮತಕ್ಷೇತ್ರದ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಫಾರ್ಮಾ ಪಾರ್ಕ್ ಪ್ರಸ್ತಾವನೆಯನ್ನು ಮೂಲಭೂತ ಸೌಕರ್ಯ ಇಲ್ಲವೆಂದು ಕೇಂದ್ರ ಸರ್ಕಾರವು ಪ್ರಸ್ತಾವನೆಯನ್ನು ತಿರಸ್ಕಾರ ಮಾಡಿದೆ. ಈ ವಿಷಯ ಶಾಸಕ ನಾಗನಗೌಡ ಗಮನಕ್ಕೆ ಬಂದ ಕೂಡಲೇ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ದೇವೇಗೌಡರು ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆ ಮಾಡುವಂತೆ ಕೇಂದ್ರ ಸಚಿವರಿಗೆ ಶಿಫಾರಸು ಮಾಡಬೇಕೆಂದು ಮನವಿ ಮಾಡಲಾಗಿತ್ತು.