ಯಾದಗಿರಿ: ಶಾಲೆಯಲ್ಲಿ ಮದ್ಯ ಸೇವಿಸಿದ ಆರೋಪದ ಮೇಲೆ ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ.
‘ಪ್ರತಿ ದಿನ ಶಾಲೆಯಲ್ಲಿ ಮದ್ಯ ಸೇವಿಸುತ್ತಾರೆ. ಎಷ್ಟು ಬಾರಿ ಹೇಳಿದರೂ ಕೇಳುತ್ತಿಲ್ಲ. ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ’ ಎಂದು ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದರು.
‘ಒಬ್ಬ ಜವಾಬ್ದಾರಿಯುತ ಮುಖ್ಯ ಶಿಕ್ಷಕ ಹೀಗೆ ಮಾಡುವುದು ಸರಿಯಲ್ಲ. ವರದಿ ತರಿಸಿಕೊಂಡು ಅವರನ್ನು ಅಮಾನತು ಮಾಡಲಾಗಿದೆ’ ಎಂದು ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದ್ದಾರೆ.