‘ಪಾಟೀಲ ಡಯಗ್ನೋಸ್ಟಿಕ್ ಮತ್ತು ಅಂಕುರ ಹೋಮಿಯೋಪತಿ ಕ್ಲಿನಿಕ್ ಮತ್ತು ಸೂಗುರೇಶ್ವರ ಕ್ಲಿನಿಕ್ಗಳ ಮೇಲೆ ದಾಳಿ ಮಾಡಲಾಗಿದೆ. ಪರಿಶೀಲನೆ ವೇಳೆ ಕೆಪಿಎಂಇ ಕಾಯ್ದೆ ಅಡಿ ನೋಂದಣಿ ಮಾಡಿಕೊಳ್ಳದಿರುವ ಬಗ್ಗೆ ಕಂಡು ಬಂದಿದ್ದು ಆಸ್ಪತ್ರೆಗಳನ್ನು ಸೀಜ್ ಮಾಡಲಾಗಿದೆ. ಸಂಬಂಧಿಸಿದ ಆಸ್ಪತ್ರೆಗಳ ವೈದ್ಯರು ಮತ್ತು ಡಯಗ್ನೋಸ್ಟಿಕ್ ಕೇಂದ್ರಗಳ ಮುಖ್ಯಸ್ಥರಿಗೆ ನೋದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ತಿಳಿಸಿದರು.