<p>ಯಾದಗಿರಿ: ನಗರದ ನಾಯ್ಕೋಡಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಏ.13ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಉಚಿತ ಶ್ರವಣ ಮೌಲ್ಯಮಾಪನ ಮತ್ತು ಭಾಷಾ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆಯ ಓಟಿಕಾನ್ ಕ್ವಿಸ್ಟ್ ಸಂಸ್ಥೆಯ ಶ್ರವಣ ತಜ್ಞ ಮತ್ತು ಭಾಷಾ ಚಿಕಿತ್ಸಕ ಸುಬ್ಬರಾಜು ತಿಳಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಮಕ್ಕಳಿಗೆ ಮತ್ತು ವೃದ್ಧರಿಗೆ ತಪಾಸಣೆ, ಚಿಕಿತ್ಸಾ ಸಲಹೆಗಳನ್ನು ನೀಡಲಾಗುವುದು. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ ಶಿಬಿರ ನಡೆಸಲಾಗುತ್ತದೆ ಎಂದರು.<br /> ಆಟಿಸಂ, ಮಾತಿನಲ್ಲಿ ತಡಬಡಿಕೆ, ಸ್ಟ್ರೋಕ್ ಬಳಿಕದ ಪರಿಸ್ಥಿತಿ, ಶ್ವಾಸನಾಳ ಶಸ್ತ್ರಚಿಕಿತ್ಸೆ ಹೀಗೆ ವಿವಿಧ ತರಹದ ತಪಾಸಣೆ ಮತ್ತು ಚಿಕಿತ್ಸಾ ಕ್ರಮಗಳನ್ನು ನೀಡಲಾಗುವುದು ಎಂದು ತಿಳಿಸಿದರು.</p>.<p>ನಾಯ್ಕೋಡಿ ಸ್ಪೆಷಾಲಿಟಿ ಆಸ್ಪತ್ರೆ ಜೊತೆಗೂಡಿ ಕಳೆದ ಒಂದು ವರ್ಷದಲ್ಲಿ 24 ಉಚಿತ ಶ್ರವಣ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ ಎಂದ ಸುಬ್ಬರಾಜು, ಹೆಚ್ಚಿನ ಮಾಹಿತಿಗಾಗಿ 9844131035 ಗೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ನಗರದ ನಾಯ್ಕೋಡಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಏ.13ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಉಚಿತ ಶ್ರವಣ ಮೌಲ್ಯಮಾಪನ ಮತ್ತು ಭಾಷಾ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆಯ ಓಟಿಕಾನ್ ಕ್ವಿಸ್ಟ್ ಸಂಸ್ಥೆಯ ಶ್ರವಣ ತಜ್ಞ ಮತ್ತು ಭಾಷಾ ಚಿಕಿತ್ಸಕ ಸುಬ್ಬರಾಜು ತಿಳಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಮಕ್ಕಳಿಗೆ ಮತ್ತು ವೃದ್ಧರಿಗೆ ತಪಾಸಣೆ, ಚಿಕಿತ್ಸಾ ಸಲಹೆಗಳನ್ನು ನೀಡಲಾಗುವುದು. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ ಶಿಬಿರ ನಡೆಸಲಾಗುತ್ತದೆ ಎಂದರು.<br /> ಆಟಿಸಂ, ಮಾತಿನಲ್ಲಿ ತಡಬಡಿಕೆ, ಸ್ಟ್ರೋಕ್ ಬಳಿಕದ ಪರಿಸ್ಥಿತಿ, ಶ್ವಾಸನಾಳ ಶಸ್ತ್ರಚಿಕಿತ್ಸೆ ಹೀಗೆ ವಿವಿಧ ತರಹದ ತಪಾಸಣೆ ಮತ್ತು ಚಿಕಿತ್ಸಾ ಕ್ರಮಗಳನ್ನು ನೀಡಲಾಗುವುದು ಎಂದು ತಿಳಿಸಿದರು.</p>.<p>ನಾಯ್ಕೋಡಿ ಸ್ಪೆಷಾಲಿಟಿ ಆಸ್ಪತ್ರೆ ಜೊತೆಗೂಡಿ ಕಳೆದ ಒಂದು ವರ್ಷದಲ್ಲಿ 24 ಉಚಿತ ಶ್ರವಣ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ ಎಂದ ಸುಬ್ಬರಾಜು, ಹೆಚ್ಚಿನ ಮಾಹಿತಿಗಾಗಿ 9844131035 ಗೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>