ಮೋಟ್ನಳ್ಳಿ ಗ್ರಾಮದಲ್ಲಿ ಮಳೆಯಿಂದ ಸಾಬಣ್ಣ ನಾಚವಾರ ಎನ್ನುವವರ ಮನೆ ಮೇಲೆ ಬೇವಿನ ಮರ ಬಿದ್ದ ಪರಿಣಾಮ ಮೇಲ್ಛಾವಣಿ, ಗೋಡೆ ಕುಸಿದಿದೆ. ವಿದ್ಯುತ್ ಕಂಬಗಳು ಉರುಳಿವೆ. ಭತ್ತ, ತೊಗರಿ, ಹತ್ತಿ, ಶೇಂಗಾ, ಈರುಳ್ಳಿ ಬೆಳೆಗಳು ನಾಶವಾಗಿವೆ. ಸ್ಥಳೀಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡುವಂತೆ ಗ್ರಾಮದ ಗುರುಲಿಂಗಯ್ಯ ಸ್ವಾಮಿ ಹಿರೇಮಠ ಒತ್ತಾಯಿಸಿದ್ದಾರೆ.