ಅಲ್ಲದೆ ನಗರದ ಬಸವೇಶ್ವರ ವೃತ್ತದಲ್ಲಿ ಅಕ್ಕ ಪಕ್ಕದ ಮಳಿಗೆ ನೀರು ನುಗ್ಗಿವೆ. ಇಲ್ಲಿ ಚರಂಡಿ ಮೇಲೆ ಮಳಿಗೆ ನಿರ್ಮಿಸಿರುವುದು ಹಾಗೂ ಅವೈಜ್ಞಾನಿಕ ಚರಂಡಿ ನಿರ್ಮಾಣ ಮತ್ತು ತ್ಯಾಜ್ಯ ವಸ್ತುಗಳನ್ನು ಚರಂಡಿಯಲ್ಲಿ ಎಸೆದಿರುವುದರಿಂದ ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಸಾಗದೆ ರಸ್ತೆಯ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ನಗರದ ಮಾವಿನಕೆರೆ ಹಾಗೂ ನಾಗರಕೆರೆಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎರಡು ಕೆರೆಗಳು ಭರ್ತಿಯಾಗುವ ಹಂತದಲ್ಲಿ ಇವೆ. ನಾಗರಕೆರೆ ಕೆಳ ಭಾಗದ ಜನತೆಗೆ ಭೀತಿ ಹೆಚ್ಚಿಸಿದೆ.
ಹಳ್ಳದ ಅಕ್ಕಪಕ್ಕದ ನಿವಾಸಿಗರಿಗೆ ತಕ್ಷಣ ನೆಲೆ ಕಲ್ಪಿಸಲಾಗಿದ್ದು,ನಿರಾಶ್ರಿತರ ಕೇಂದ್ರ ಸ್ಥಾಪಿಸಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ.