<p><strong>ಶಹಾಪುರ:</strong> ತಾಲ್ಲೂಕಿನ ಕನ್ಯಾಕೊಳ್ಳುರ ಗ್ರಾಮದ ವ್ಯಾಪ್ತಿಯಲ್ಲಿ ಗುರುವಾರ 68.8 ಮಿ.ಮೀ ಮಳೆಯಾಗಿದೆ. ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಸುನಿಲಕುಮಾರ ಯರಗೊಳ ತಿಳಿಸಿದರು.</p>.<p>ತಾಲ್ಲೂಕಿನ ತಿಪ್ಪನಹಳ್ಳಿ ಗ್ರಾಮದ ಬಳಿ ಗದಗ-ವಾಡಿ ರೈಲ್ವೆ ಸೇತುವೆ ಕಾಮಗಾರಿ ನಡೆದಿದೆ. ಮಳೆ ನೀರು ಹೋಗಲು ಸರಿಯಾದ ರಸ್ತೆ ವ್ಯವಸ್ಥೆ ಮಾಡದ ಕಾರಣ ಸುಮಾರು 7 ಎಕರೆಯಲ್ಲಿ ಬೆಳೆದು ನಿಂತ ಹತ್ತಿ, ಮೆಣಸಿನಕಾಯಿ ಬೆಳೆ ನೀರು ಪಾಲಾಗಿವೆ ಎನ್ನುತ್ತಾರೆ ಭೀಮರಾಯ ತಿಪ್ಪನಹಳ್ಳಿ.</p>.<p>ತಾಲ್ಲೂಕಿನಲ್ಲಿ ಮತ್ತೆ ಎರಡು ದಿನದಲ್ಲಿ ಹೆಚ್ಚಿನ ಮಳೆಯಾಗಿದೆ. 10 ಮನೆ ಕುಸಿದಿವೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮಳೆಯಾಗುತ್ತಿರುವುದರಿಂದ ಸದ್ಯಕ್ಕೆ ಸರ್ವೆ ಕಾರ್ಯ ನಿಲ್ಲಿಸಿದ್ದೇವೆ ಎಂದು ತಹಶೀಲ್ದಾರ್ ಸಿದ್ದರೂಢ ಬನ್ನಿಕೊಪ್ಪ ಮಾಹಿತಿ ನೀಡಿದರು.</p>.<p>ಹತ್ತಿ ಮತ್ತು ಮೆಣಸಿನಕಾಯಿ ಬೆಳೆದ ನಮ್ಮ ಪಾಡು ಹೇಳ ತೀರದು. ವಾತಾವರಣದಲ್ಲಿ ಏರುಪೇರು ಹಾಗೂ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆ ಸಂಪೂರ್ಣವಾಗಿ ಹಾನಿಯಾಗಿವೆ. ಮುಂದೇನು ಎಂಬ ಆತಂಕ ಶುರುವಾಗಿದೆ ಎನ್ನುತ್ತಾರೆ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ:</strong> ತಾಲ್ಲೂಕಿನ ಕನ್ಯಾಕೊಳ್ಳುರ ಗ್ರಾಮದ ವ್ಯಾಪ್ತಿಯಲ್ಲಿ ಗುರುವಾರ 68.8 ಮಿ.ಮೀ ಮಳೆಯಾಗಿದೆ. ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಸುನಿಲಕುಮಾರ ಯರಗೊಳ ತಿಳಿಸಿದರು.</p>.<p>ತಾಲ್ಲೂಕಿನ ತಿಪ್ಪನಹಳ್ಳಿ ಗ್ರಾಮದ ಬಳಿ ಗದಗ-ವಾಡಿ ರೈಲ್ವೆ ಸೇತುವೆ ಕಾಮಗಾರಿ ನಡೆದಿದೆ. ಮಳೆ ನೀರು ಹೋಗಲು ಸರಿಯಾದ ರಸ್ತೆ ವ್ಯವಸ್ಥೆ ಮಾಡದ ಕಾರಣ ಸುಮಾರು 7 ಎಕರೆಯಲ್ಲಿ ಬೆಳೆದು ನಿಂತ ಹತ್ತಿ, ಮೆಣಸಿನಕಾಯಿ ಬೆಳೆ ನೀರು ಪಾಲಾಗಿವೆ ಎನ್ನುತ್ತಾರೆ ಭೀಮರಾಯ ತಿಪ್ಪನಹಳ್ಳಿ.</p>.<p>ತಾಲ್ಲೂಕಿನಲ್ಲಿ ಮತ್ತೆ ಎರಡು ದಿನದಲ್ಲಿ ಹೆಚ್ಚಿನ ಮಳೆಯಾಗಿದೆ. 10 ಮನೆ ಕುಸಿದಿವೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಮಳೆಯಾಗುತ್ತಿರುವುದರಿಂದ ಸದ್ಯಕ್ಕೆ ಸರ್ವೆ ಕಾರ್ಯ ನಿಲ್ಲಿಸಿದ್ದೇವೆ ಎಂದು ತಹಶೀಲ್ದಾರ್ ಸಿದ್ದರೂಢ ಬನ್ನಿಕೊಪ್ಪ ಮಾಹಿತಿ ನೀಡಿದರು.</p>.<p>ಹತ್ತಿ ಮತ್ತು ಮೆಣಸಿನಕಾಯಿ ಬೆಳೆದ ನಮ್ಮ ಪಾಡು ಹೇಳ ತೀರದು. ವಾತಾವರಣದಲ್ಲಿ ಏರುಪೇರು ಹಾಗೂ ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆ ಸಂಪೂರ್ಣವಾಗಿ ಹಾನಿಯಾಗಿವೆ. ಮುಂದೇನು ಎಂಬ ಆತಂಕ ಶುರುವಾಗಿದೆ ಎನ್ನುತ್ತಾರೆ ರೈತರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>